ಬೆಂಗಳೂರು: ಎರಡು ಬೈಕ್ ಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಾದನಾಯಕನಹಳ್ಳಿ (Madanayakanahalli) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸಿದ್ದನಹೊಸಹಳ್ಳಿಯಲ್ಲಿ ನಡೆದಿದೆ. ಬೈಕ್ ಗಳು ವೇಗವಾಗಿ ಬಂದು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಎದರು ಬರುತ್ತಿದ್ದ ಟಿಟಿ ತಪ್ಪಿಸಲು ಹೋಗಿ ಪಕ್ಕದಲ್ಲಿಯೇ ಬರುತ್ತಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಕುಡಿತದ ಅಮಲಿನಲ್ಲಿದ್ದವನ ಅತಿಯಾಟಕ್ಕೆ ಈ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಕೂಲಿ ಕಾರ್ಮಿಕ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ನಿವಾಸಿ ಧನರಾಜ್ ಹೀಗೆ ಅತೀ ವೇಗವಾಗಿ ಬಂದ ವ್ಯಕ್ತಿ ಎನ್ನಲಾಗಿದೆ. ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಸ್ಥಳದಿದಂ ಪರಾರಿಯಾಗಿದ್ದಾರೆ ಎನ್ನಲಾಗಿದೆ.