ಶಾಸಕ ಓಲೇಕಾರ್ ಇಬ್ಬರು ಮೊಮ್ಮಕ್ಕಳು ಆತ್ಮಹತ್ಯೆ
ಹಾವೇರಿ : ಬಿಜೆಪಿ ಶಾಸಕ ಓಲೇಕಾರ್ ಅವರ ಇಬ್ಬರು ಮೊಮ್ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗರಾಜ ಚಂದ್ರು ಛಲವಾದಿ (16) ಹಾಗೂ ಭಾಗ್ಯಲಕ್ಷ್ಮಿ ಚಂದ್ರು ಛಲವಾದಿ (18) ಆತ್ಯಹತ್ಯೆಗೆ ಶರಣಾದ ದುರ್ದೈವಿಗಳು.
ಇವರು ಬ್ಯಾಡಗಿಯ ವಿನಾಯಕ ನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಎಸ್ ಎಸ್ ಎಲ್ ಸಿ ಓದುತ್ತಿದ್ದ ನಾಗರಾಜ್ ವಿಷಯಗಳು ಕಠಿಣ ಎಂದು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದರಂತೆ.
ಈ ವಿಚಾರ ತಿಳಿದು ಸರಿಯಾಗಿ ಶಾಲೆಗೆ ಹೋಗು, ಅವರಿವರ ಜೊತೆ ತಿರುಗಾಡಬೇಡ ಎಂದು ತಂದೆ ಬುದ್ಧವಾದ ಹೇಳಿದ್ದರಂತೆ.
ಇದರಿಂದ ಕೋಪಗೊಂಡು ನಾಗರಾಜ ನೇಣಿಗೆ ಶರಣಾಗಿದ್ದಾನೆ.
ಈ ಮಾಹಿತಿ ತಿಳಿದು ಮನೆಗೆ ಬಂದ ಭಾಗ್ಯಲಕ್ಷ್ಮೀ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.