ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು
ರಾಯಚೂರು: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಟಣಮನಕಲ್ ಬಳಿ ನಡೆದಿದೆ.
ಸಂತೋಷ್ ಹಾಗೂ ಅನಿಲ್ ಕುಮಾರ್ ಮೃತ ದುರ್ದೈವಿಗಳು. ಹಟ್ಟಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ. ಇಬ್ಬರ ಯುವಕರಲ್ಲಿ ಸಂತೋಶ ಶಶವ ಪತ್ತೆಯಾಗಿದ್ದು, ಅನೀಲ್ ಕುಮಾರ್ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.
ಹಟ್ಟಿ ಪಟ್ಟಣದ ಐದು ಜನ ಯುವಕರು ಕೃಷ್ಣಾ ನದಿಗೆ ಈಜಾಡಲು ಹೋಗಿದ್ದರು. ಈ ವೇಳೆ ನದಿಯಲ್ಲಿ ಇಬ್ಬರು ನೀರುಪಾಲಾಗಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.