ಕನ್ಹಯ್ಯ ಲಾಲ್ ಅವರ ಹತ್ಯೆ ಪ್ರಕರಣದ ನಂತರ ಕೆಂಡದಂತಾಗಿದ್ದ ಉದಯಪುರ ಸದ್ಯ ಸಹಜ ಸ್ಥಿಗೆ ಮರಳುತ್ತಿದೆ..
ಭಾನುವಾರ 10 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿದೆ. ಆದ್ರೆ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಉದಯಪುರದ ಟೇಲರ್ ಕನ್ಹಯ್ಯ ಲಾಲ್ ಅವರು ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ ನಂತರ ದುಷ್ಕರ್ಮಿಗಳು ಅವರನ್ನ ಹತ್ಯೆ ಮಾಡಿದ್ದರು.. ಈ ಪ್ರಕರಣ ಇಡೀ ದೇಶವನ್ನ ಬೆಚ್ಚಿ ಬೀಳಿಸಿದ್ದು ಆಕ್ರೋಶ ಭುಗಿಲೇಳಿಸಿದೆ..
ಇದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ವ್ಯಾಪಕ ಹಿಂಸಾಚಾರವೂ ನಡೆದುಹೋಗಿದೆ… ಈ ಹಿನ್ನೆಲೆಯಲ್ಲಿ ಉದಯಪುರದ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಉದಯಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಭಾನುವಾರ ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ..