ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪಿಎಂ ಭೇಟಿ ಬಳಿಕ ಮಾತನಾಡಿದ ಅವರು, ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಅಧಿಕಾರ ವಹಿಸಿಕೊಂಡ ನಂತರ ಭೇಟಿಯಾಗಬೇಕಿತ್ತು. ಆಗ ದೆಹಲಿ ವಿಧಾನಸಭೆ ಚುನಾವಣೆ ಇದ್ದ ಹಿನ್ನೆಲೆಯಲ್ಲಿ ಸಾಧ್ಯವಾಗಲಿಲ್ಲ. ಹೀಗಾಗಿ ಈಗ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಆಡ್ವಾಣಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೂಡ ಭೇಟಿ ಮಾಡಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಹಿಜ್ಬುಲ್ಲಾ ನೆಲೆ ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ
ಜೆರುಸಲೇಮ್: ಇಸ್ರೇಲ್ ಮತ್ತೆ ಇರಾನ್ ವಿರುದ್ಧ ತಿರುಗಿ ಬಿದ್ದಿದೆ. ದಕ್ಷಿಣ ಲೆಬನಾನ್ ನಲ್ಲಿರುವ ಹಿಜ್ಬುಲ್ಲಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಇತ್ತೀಚೆಗಷ್ಟೇ ಇಸ್ರೇಲ್ ಮೇಲೆ ಇರಾನ್...