ಉಡುಪಿ: ಬಿಲಿಯನೇರ್ ರೈತ ಪ್ರಶಸ್ತಿಗೆ ಜಿಲ್ಲೆಯ ರಮೇಶ್ ನಾಯಕ್ (Thekkatte’s Ramesh Nayak) ಆಯ್ಕೆಯಾಗಿದ್ದಾರೆ.
ಇವರು ರೈಸ್ ಮಿಲ್ ಉದ್ಯಮದ ಜೊತೆಗೆ ಕೃಷಿ ಮೌಲ್ಯವರ್ಧನೆ ಹಾಗೂ ರೈತರಿಗೆ ಬೆನ್ನುಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರೂ. ಅಧಿಕ ವಹಿವಾಟು ನಡೆಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ನೀಡುವ ಬಿಲಿಯೇನರ್ ರೈತ ಪ್ರಶಸ್ತಿಗೆ (Billionaire Farmer Award)ಉಡುಪಿ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಡಿ. 7ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಮೇಶ್ ನಾಯಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.
ತೆಕ್ಕಟ್ಟೆಯ ರೈಸ್ಮಿಲ್ ಉದ್ಯಮಿಯಾಗಿರುವ ರಮೇಶ್ ನಾಯಕ್ ಅವರು ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ 13 ಎಕರೆ ಜಮೀನಿನಲ್ಲಿ ಸುಮಾರು 11 ಜಾತಿಯ 1634 ವಿವಧ ತಳಿತ ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಲ ಬೆಳೆಸಿದ್ದಾರೆ. 30 ಸಾವಿರ ಅನಾನಸ್ ಗಿಡಗಳನ್ನು ನಾಟಿ ಮಾಡಲಾಗಿದ್ದು, ಇದರ ಮಧ್ಯೆ ಪಪ್ಪಾಯಿ ಗಿಡಗಳನ್ನು ನೆಟ್ಟಿದ್ದಾರೆ. 285 ಹಲಸು,500 ಡ್ರ್ಯಾಗನ್ ಫ್ರೂಟ್ ಸೇರಿದಂತೆ ಒಟ್ಟು 1634 ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಮಾದರಿಯಾಗಿದ್ದಾರೆ. ಹೀಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.