ಅಂಡರ್ 19 ಏಕದಿನ ವಿಶ್ವಕಪ್ ನಲ್ಲಿ ಭಾರತ ತಂಡ ಫೈನಲ್ ಪ್ರವೇಶಿಸಿದೆ.
ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎರಡು ವಿಕೆಟ್ಗಳ ಗೆಲುವು ಸಾಧಿಸಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಭಾರತ ತಂಡದ ಪರ ಸಚಿನ್ ದಾಸ್ ಮತ್ತು ಉದಯ್ ಸಹರಾನ್ ಕಷ್ಟದ ಸಮಯದಲ್ಲಿ ತಾಳ್ಮೆ ಹಾಗೂ ಎಚ್ಚರಿಕೆ ಆಟವಾಡಿ ಗೆಲುವಿನ ದಡ ಸೇರಿಸಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 244 ರನ್ ಗಳಿಸಿತ್ತು. ಲುಹಾನ್ ಡ್ರೆ ಪ್ರಿಟೋರಿಯಸ್ 76 ರನ್ ಹಾಗೂ ರಿಚರ್ಡ್ ಸೆಲೆಟ್ಸ್ವೇನ್ 64 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.
245 ರನ್ ಗಳ ಗುರಿ ಬೆನ್ನಟ್ಟಿ ಭಾರತ ತಂಡಕ್ಕೆ ಆರಂಭದಲ್ಲಿ ಆಘಾತ ಕಾಡಿತ್ತು. ಆದರೆ, ಸಚಿನ್ ದಾಸ್ ಹಾಗೂ ಉದಯ್ ಸಹರಾನ್ ಅವರ ಅಮೋಘ ಪ್ರದರ್ಶನದಿಂದಾಗಿ 8 ವಿಕೆಟ್ಗಳನ್ನು ಕಳೆದುಕೊಂಡು 48.5 ಓವರ್ಗೆ 248 ಗಳಿಸಿ ಫೈನಲ್ ಪ್ರವೇಶಿಸಿತು. ಸಚಿನ್ ದಾಸ್ 96 ರನ್ ಗಳಿಸಿದರೆ, ಉದಯ್ ಸಹರಾನ 81 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಹರಾನ ತಾಳ್ಮೆಯ ಆಟಕ್ಕೆ ಹಾಗೂ ಕೊನೆಯವರೆಗೂ ಹೋರಾಟ ನಡೆಸಿದ್ದಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.