ಮೋದಿಯ ನೋಟ್ ಬ್ಯಾನ್ ನಿಂದ ನಿರುದ್ಯೋಗ ಹೆಚ್ಚಾಗ್ತಿದೆ : ಮನಮೋಹನ್ ಸಿಂಗ್ ( Manmohan Singh)
ತಿರುವನಂತಪುರಂ : ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೆಗೆದುಕೊಂಡ ನೋಟ್ ಬ್ಯಾನ್ ನಿಂದಾಗಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಮತ್ತು ಅನೌಪಚಾರಿಕ ವಲಯ ಅಸ್ತವ್ಯಸ್ತಗೊಂಡಿದೆ ಅಂತಾ ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರುವನಂತಪುರಂನಲ್ಲಿ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಡೆವಲಪ್ಮೆಂಟ್ ಸ್ಟಡೀಸ್ ಆಯೋಜಿಸಿದ್ದ ಅಭಿವೃದ್ಧಿ ಶೃಂಗಸಭೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಮನಮೋಹನ್ ಸಿಂಗ್, ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಅನೌಪಚಾರಿಕಾ ವಲಯ ಅಸ್ತವ್ಯಸ್ತವಾಗುತ್ತಿದೆ. ಇದಕ್ಕೆ 2016ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೆಗೆದುಕೊಂಡ ಡಿಮಾನಿಟೈಸೇಷನ್ ಕಾರಣ ಎಂದು ಆರೋಪಿಸಿದರು. ಅಲ್ಲದೆ ದೇಶದ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ನಿಯಮಿತವಾಗಿ ಸಮಾಲೋಚನೆ ನಡೆಸುತ್ತಿಲ್ಲ ಎಂದು ಟೀಸಿದ ಮನಮೋಹನ್ ಸಿಂಗ್, ರಾಜ್ಯ ಸರ್ಕಾರಗಳು ಅತಿಯಾದ ಸಾಲವನ್ನು ಆಶ್ರಯಿಸಬೇಕಾಗಿರುವುದರಿಂದ ಸಾರ್ವಜನಿಕ ಹಣಕಾಸು ಅಸ್ತವ್ಯಸ್ತವಾಗಿದೆ. ಇದು ಭವಿಷ್ಯದ ಬಜೆಟ್ ಮೇಲೆ ಮತ್ತಷ್ಟು ಹೊರೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.