ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನರು ಪರಿತಪಿಸುವಂತಾಗಿದೆ. ಅಲ್ಲದೇ, ಮಲೆನಾಡು, ಕಾರವಳಿ ಪ್ರದೇಶದಲ್ಲಿಯೂ ಮಳೆಯಾಗುತ್ತಿದೆ.
ಮಳೆಯಿಂದಾಗಿ ಬೆಂಗಳೂರಿನ ಕೆಂಗೇರಿಯಲ್ಲಿ ದಾಖಲೆಯ 141, ಸೂಳೆಕೆರೆಯಲ್ಲಿ 115, ಆರ್ಆರ್ ನಗರದಲ್ಲಿ 106 ಮಿಲಿಮೀಟರ್ ಮಳೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ನೀರು ಆವರಿಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಟು ನಡೆಸುವಂತಾಗಿತ್ತು. ಸಾಯಿ ಲೇಔಟ್ ಮತ್ತೊಮ್ಮೆ ಜಲಾವೃತಗೊಂಡಿದೆ.
ಕುಮಾರಸ್ವಾಮಿ ಲೇಔಟ್ ಕೂಡ ಜಲಾವೃತವಾಗಿದೆ. ಕೆಂಗೇರಿ, ಆರ್ ಆರ್ ನಗರ, ಉತ್ತರಹಳ್ಳಿ ಭಾಗಗಳಲ್ಲಿಯೂ ಮಳೆಯಾಗಿದ್ದು, ಕೆಲವೆಡೆ ಮನೆಗಳಿಗೆ ನೀರು ನುಗ್ಗಿವೆ. ದಕ್ಷಿಣ ಒಳನಾಡು-ಮಲೆನಾಡು-ಕರಾವಳಿ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಹೀಗಾಗಿ ಇಡೀ ರಾಜ್ಯದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.