ಭೋಪಾಲ್: ಕೇಂದ್ರ ಸಚಿವರ ಕಾರು ಅಪಘಾತವಾಗಿದ್ದು, ಶಿಕ್ಷಕರೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ (Madhya Pradesh) ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ (Central Minister Pralhad Patel) ಹೊರಟಿದ್ದ ಕಾರು ಅಪಘಾತಕ್ಕೀಡಗಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ನ. 17ರಂದು ನಡೆಯಲಿರುವ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಚಿಂದ್ವಾರದಿಂದ ನರಸಿಂಗ್ಪುರ ಕಡೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ನಿರಂಜನ್ ಚಂದ್ರವನ್ಶಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಿರಂಜನ್ ಮಕ್ಕಳು ನಿಖಿಲ್ ನಿರಂಜನ್ (7) ಮತ್ತು ಸಂಸ್ಕರ್ ನಿರಂಜನ್ (10) ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ. ಸಾವನ್ನಪ್ಪಿದ ವ್ಯಕ್ತಿ ಬೈಕ್ ನಲ್ಲಿ ತಮ್ಮ ಮಕ್ಕಳೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸುಧೀರ್ ಜೈನ್ ತಿಳಿಸಿದ್ದಾರೆ.