ದೀರ್ಘ ಕೋವಿಡ್ ನಿಂದ ಬಳಲುತ್ತಿರುವ ಲೆಕ್ಕಕ್ಕೆ ಸಿಗದ ಸಂಖ್ಯೆಗಳ ಬಗ್ಗೆ ವಿಶ್ವಸಂಸ್ಥೆ ಕಳವಳ..!
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಮತ್ತೊಂದು ಆಗಾತಕಾರಿ ಸುದ್ದಿ ಹೊರಬಿದ್ದಿದೆ. ವಿಶ್ವದಾದ್ಯಂತ ಸುಮಾರು 20 ಕೋಟಿ ಜನರು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ದೀರ್ಘ ಕೋವಿಡ್ ನಿಂದ ಬಳಲುತ್ತಿರುವ ಲೆಕ್ಕಕ್ಕೆ ಸಿಗದ ಸಂಖ್ಯೆಗಳ ಬಗ್ಗೆ ಹೆಚ್ಚು ಕಳವಳಗೊಂಡಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಹೌದು.. ಕೋವಿಡ್ನಿಂದ ಗುಣಮುಖರಾದ ನಂತರವೂ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರ ಬಗ್ಗೆ WHO ಗಮನ ಹರಿಸಿದೆ. ಕೋವಿಡ್ನಿಂದ ಚೇತರಿಸಿಕೊಂಡ ಬಳಿಕವೂ ಅದರ ಪರಿಣಾಮ ಎದುರಿಸುತ್ತಿರುವ ಜನರು ವೈದ್ಯಕೀಯ ಸಹಾಯ ಪಡೆಯುವಂತೆ ವಿಶ್ವ ಆರೋಗ್ಯ ಸಂಸ್ಥೆ ಕೋರಿದೆ.
ದೀರ್ಘ ಕೋವಿಡ್ ಸಾಂಕ್ರಾಮಿಕ ರೋಗದ ಅತ್ಯಂತ ನಿಗೂಢ ಅಂಶಗಳಲ್ಲಿ ಒಂದಾಗಿದೆ ಎಂದು ಅದು ಹೇಳಿದೆ. ಈ ಕೋವಿಡ್ ನಂತರದ ಸಿಂಡ್ರೋಮ್ ಅಥವಾ ಲಾಂಗ್ ಕೋವಿಡ್ ಬಗ್ಗೆ ಡಬ್ಲ್ಯುಎಚ್ಒ ತೀವ್ರವಾಗಿ ಚಿಂತಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ -19 ಟೆಕ್ನಿಕಲ್ ಲೀಡ್ ಮಾರಿಯಾ ವ್ಯಾನ್ ಕೆರ್ಖೋವ್ ಹೇಳಿದ್ದಾರೆ.
ಕೋವಿಡ್ -19 ರೋಗವನ್ನು ಉಂಟುಮಾಡುವ ಸಾರ್ಸ್-ಕೋವ್-2 ಸೋಂಕಿಗೆ ಒಳಗಾದವರಲ್ಲಿ ಅನೇಕರು ದೀರ್ಘಕಾಲೀನ ಪರಿಣಾಮಗಳಿಂದ ಬಳಲುತ್ತಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಈ ಪರಿಣಾಮಗಳು ಎಷ್ಟು ಕಾಲ ಉಳಿಯುತ್ತವೆ ಎಂದು ನಮಗೆ ತಿಳಿದಿಲ್ಲ. ಈ ಕೋವಿಡ್ ನಂತರದ ಸಿಂಡ್ರೋಮ್ ಏನೆಂಬುದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ವಿವರಿಸಲು ನಾವು ಇದರ ಮೇಲೆ ಅಧ್ಯಯನ ಮಾಡುತ್ತಿದ್ದೇವೆ ಎಂದು ವ್ಯಾನ್ ಕೆರ್ಖೋವ್ ಹೇಳಿದರು.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.