ಸೋಮವಾರದಿಂದ ಅನ್ ಲಾಕ್ ಆರಂಭ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು : ಕೊರೊನಾ ಪಾಸಿಟಿವ್ ರೇಟ್ ಹೆಚ್ಚಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಲಾಕ್ ಡೌನ್ ವಿಸ್ತರಣೆ ಮಾಡಿ, ಇನ್ನುಳಿದ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಪ್ರಕ್ರಿಯೆ ಆರಂಭಿಸಿದೆ.
ಅನ್ ಲಾಕ್ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇದೀಗ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಆದೇಶ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಅನ್ ಲಾಕ್ ಜಿಲ್ಲೆಗಳಲ್ಲಿ ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿತ್ತದೆ. ಜೊತೆಗೆ ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಈ ಹಿಂದಿನ ಆದೇಶದಲ್ಲಿದ್ದಂತೆ ಮದುವೆಗೆ 40 ಮಂದಿ, ಅಂತ್ಯಸಂಸ್ಕಾರಕ್ಕೆ ಗರಿಷ್ಟ 5 ಮಂದಿ ಭಾಗವಹಿಸಲು ಮಾತ್ರ ಅನುಮತಿ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಾತಿಗೆ ಅವಕಾಶ ಮತ್ತು ಗಾಮೆರ್ಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ.
ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದ್ರೆ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಂಚರಿಸಬಹುದು.
ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ಮಾಡಿಕೊಡಲಾಗಿದೆ. ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರಕ್ಕೆ ನಿಬರ್ಂಧ ಇರಲಿದೆ. ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ.