ಕೇದಾರನಾಥದಲ್ಲಿ ನಾಳೆ ಶಂಕರಾಚಾರ್ಯ ಪ್ರತಿಮೆ ಅನಾವರಣ Shankaracharya saaksha tv
ನವ ದೆಹಲಿ : ನಾಳೆ ಉತ್ತರಾಖಂಡದ ಕೇದಾರನಾಥ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅದ್ವೈತ ತತ್ವ ಪ್ರತಿಪಾದಕ ಶಂಕರಾಚಾರ್ಯ ಅವರ 12 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ.
ಮೈಸೂರಿನ ಹೆಸರಾಂತ ಶಿಲ್ಪ ಕಲಾಕಾರರು ಈ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದಾರೆ.
ಸಾಂಸ್ಕøತಿಕ ನಗರಿ ಮೈಸೂರಿನ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಅರುಣ್ ಯೋಗಿರಾಜ್ ಮತ್ತವರ ತಂಡ 9 ತಿಂಗಳ ಅವಧಿಯಲ್ಲಿ ಪ್ರತಿಮೆಯನ್ನು ಸಿದ್ಧಪಡಿಸಿ, ಕೇದಾರನಾಥದಲ್ಲಿ ಅದನ್ನು ಅಳವಡಿಸುವ ಕಾರ್ಯ ಪೂರ್ಣಗೊಳಿಸಿದ್ದಾರೆ.
80 ಟನ್ ಕಲ್ಲನ್ನು ಕೆತ್ತಿ ಅಂತಿಮವಾಗಿ 28 ಟನ್ ನಲ್ಲಿ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ.
ಹಾಸನದ ಬೇಲೂರು, ಹಳೇಬಿಡಿನ ಶಿಲ್ಪಕಲೆಗೆ ಬಳಸಿರುವ ಕೃಷ್ಣ ಶಿಲೆ ಕಲ್ಲನ್ನು ಬಳಸಲಾಗಿದ್ದು, ಮಳೆ, ಬಿಸಿಲು, ಬೆಂಕಿ, ನೀರು ಸೇರಿದಂತೆ ಯಾವುದರಿಂದಲೂ ಹಾನಿಯಾಗುವುದಿಲ್ಲ.