ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

UP Assembly Election 2022: ಕುಲಗಳ ಕುರುಕ್ಷೇತ್ರದಲ್ಲಿ ಪಾರ್ಟಿಗಳ ಪ್ಲಾನಿಂಗ್

Mahesh M Dhandu by Mahesh M Dhandu
January 29, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

UP Assembly Election 2022: ಕುಲಗಳ ಕುರುಕ್ಷೇತ್ರದಲ್ಲಿ ಪಾರ್ಟಿಗಳ ಪ್ಲಾನಿಂಗ್

ಐದು ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರ ಹಿಡಿಯುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಯತ್ನಗಳು ಅಷ್ಟು ಸುಲಭವಾಗಿ ಯಶಸ್ವಿಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ ಎನ್ನುತ್ತಿದೆ ಗ್ರೌಂಡ್ ರಿಪೋರ್ಟ್. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಾರ್ಟಿ ಈ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಪೈಪೋಟಿ ನೀಡುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಇದರ ಜೊತೆಗೆ, ಇತ್ತೀಚಿನ ರೈತ ಚಳವಳಿಗಳ ಕೇಂದ್ರಬಿಂದುವಾಗಿರುವ ಪಶ್ಚಿಮ ಉತ್ತರ ಪ್ರದೇಶದ ರಾಜಕೀಯ ಪಕ್ಷಗಳ ಚುನಾವಣಾ ಮೈತ್ರಿಗಳು ಮತ್ತು ರಾಜಕೀಯ ಪಕ್ಷಗಳ ತಂತ್ರಗಳು ಬಿಜೆಪಿ ಕಣ್ಣಿಗೆ ನಿದ್ದೆ ಬಾರದಂತೆ ಮಾಡಿದೆ.  ಜಾತಿಗಳ ಒಗ್ಗೂಡಿಸುವಿಕೆಯೊಂದಿಗೆ ಕಳೆದ ಚುನಾವಣೆಯ ವೈಭವವನ್ನು ಉಳಿಸಿಕೊಳ್ಳುವ  ಬಿಜೆಪಿ ಆಶಯವನ್ನು ವಿಫಲಗೊಳಿಸಬೇಕೆಂದು ಸಮಾಜವಾದಿ ಪಕ್ಷವು ಪ್ರಯತ್ನಿಸುತ್ತಿದೆ. ಜಾಟರು, ಮುಸ್ಲಿಮರು ಮತ್ತು ರೈತರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಜಾತಿ, ಸಮುದಾಯದ ಮತಗಳನ್ನು ಕಸಿದುಕೊಳ್ಳಲು ಎಸ್ ಪಿ ಸರ್ವ ಪ್ರಯತ್ನ ಮಾಡುತ್ತಿದೆ. ಆರ್‌ಎಲ್‌ಡಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಜಾಟ್‌ ರನ್ನು ಸಮಾಧಾನಪಡಿಸುವಲ್ಲಿ ಎಸ್‌ಪಿ ಈಗಾಗಲೇ ಯಶಸ್ವಿಯಾಗಿದೆ. ಇತ್ತ ಜಾಟ್‌ ಗಳನ್ನು ವಿಭಜಿಸಿ  ಮೈತ್ರಿ ತಂತ್ರಗಳನ್ನು ವಿಫಲಗೊಳಿಸುವ ಯೋಜನೆಗಳೊಂದಿಗೆ ಬಿಜೆಪಿ ಅಸ್ತ್ರಗಳನ್ನು ಹೂಡುತ್ತಿದೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಮುಸ್ಲಿಂ- ಜಾಟರ ಸಂಬಂಧ.. ಹೇಗಿದೆ..

up-assembly-election-2022-BJP SP BSP planing saaksha tv

ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಅವರ ಅಜ್ಜ ಮತ್ತು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ‘ಕಿಸಾನ್ ನಾಯಕರೆಂದು ಗುರುತಿಸಿಕೊಂಡವರು. ಅವರ ಕಾಲದಲ್ಲಿ ಮುಸ್ಲಿಮರು ಮತ್ತು ಜಾಟ್ ರು ಒಟ್ಟಾಗಿದ್ದರು.  ಎಸ್‌ಪಿ-ಬಿಎಸ್‌ಪಿ ಹುಟ್ಟುವುದಕ್ಕೂ ಮೊದಲು, ಪಶ್ಚಿಮ ಯುಪಿ ಮುಸ್ಲಿಮರು ಚರಣ್ ಸಿಂಗ್ ಅವರನ್ನು ಬೆಂಬಲಿಸಿದ್ದರು. ಇದನ್ನೇ  ಅಜಿತ್ ಸಿಂಗ್ ಕೂಡ ರಾಜಕೀಯದಲ್ಲಿ ಮುಂದುವರೆಸಿಕೊಂಡು ಬಂದರು. ಆದರೆ, 2013ರ ಮುಜಾಫರ್‌ನಗರ ಗಲಭೆಯಿಂದ ಜಾಟ್-ಮುಸ್ಲಿಂ ಬಾಂಧವ್ಯಕ್ಕೆ ಧಕ್ಕೆಯಾಯಿತು. ಗಲಭೆಯ ನಂತರ, ಎರಡು ಸಮುದಾಯಗಳ ನಡುವೆ ಬಿರುಕು ಮೂಡಿ ಮುಸ್ಲಿಮರು ಆರ್‌ಎಲ್‌ಡಿಯಿಂದ ಹಿಂದೆ ಸರಿದರು. ಇದರಿಂದಾಗಿ 2014 ಮತ್ತು 2019ರ ಚುನಾವಣೆಯಲ್ಲಿ ಆರ್‌ಎಲ್‌ಡಿ ಒಂದೇ ಒಂದು ಲೋಕಸಭಾ ಸ್ಥಾನವನ್ನು ಗೆಲ್ಲಲಿಲ್ಲ.

ಈ ಬಿರುಕಿಗೆ ಮೈತ್ರಿ ಮೂಲಕ ಮುಲಾಮು ಹಚ್ಚಲು ಮುಂದಾಗಿರುವ ಎಸ್‌ಪಿ, ಆರ್ ಎಲ್ ಡಿ ಗೆ 33 ಸ್ಥಾನಗಳನ್ನು ನೀಡದೆ.  ಇಲ್ಲಿ ಜಾಟ್-ಮುಸ್ಲಿಂ-ರೈತರು ಒಗ್ಗೂಡಿಸಿದರೆ ಕನಿಷ್ಠ 50 ಸ್ಥಾನಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆ ಎಸ್ ಪಿಯದ್ದಾಗಿದೆ. ಇನ್ನು 33 ಸ್ಥಾನಗಳ ಈ ಪೈಕಿ ಆರ್‌ಎಲ್‌ಡಿ 5 ಸ್ಥಾನಗಳನ್ನು ಮುಸ್ಲಿಮರಿಗೆ ನೀಡಿದೆ. ಸಮಾಜವಾದಿ ಪಾರ್ಟಿ ಎಂಟು ಸ್ಥಾನಗಳಲ್ಲಿ ಮುಸ್ಲಿಮರನ್ನು ಕಣಕ್ಕಿಳಿಸಿದೆ.

ಜಾಟರ ಒಲವು ಯಾರ ಕಡೆ..?

ಪಶ್ಚಿಮ ಯುಪಿಯಲ್ಲಿ ಪಕ್ಷಗಳ ಗೆಲುವಿನ ಪಾತ್ರ ನಿರ್ಣಾಯಕವಾಗಿದೆ. ಕಳೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜಾಟ್‌ ರ ಬೆಂಬಲದೊಂದಿಗೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಆದರೆ, ರೈತ ಚಳವಳಿಯ ಹಿನ್ನೆಲೆಯಲ್ಲಿ ಜಾಟ್‌ ರು ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆ. ಅದು ಎಸ್‌ಪಿ-ಆರ್‌ಎಲ್‌ಡಿ ಮೈತ್ರಿಗೆ ಲಾಭವಾಗುವ ಸಾಧ್ಯತೆಗಳಿವೆ. ಇತ್ತ ಬಿಜೆಪಿ ಸಮಾಜವಾದಿ ಪಾರ್ಟಿ ಅಧಿಕಾರಕ್ಕೆ ಬಂದ್ರೆ ಜಯಂತ್ ಸಿಂಗ್ ರಬ್ಬರ್ ಸ್ಟಾಂಪ್ ಆಗುತ್ತಾರೆ ಎಂದು ಪ್ರಚಾರ ಮಾಡುತ್ತಾ, ಚಾಟ್ ರ ಮತಗಳಿಸಲು ಮುಂದಾಗಿದೆ.

 ಎಸ್ ಪಿಗೆ ಬಿಎಸ್ ಪಿ ಟಕ್ಕರ್

up-assembly-election-2022-BJP SP BSP planing saaksha tv

ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಮುಜಾಫರ್‌ನಗರ ವಿಭಾಗದಲ್ಲಿ ಸಮಾಜವಾದಿ ಪಾರ್ಟಿ, ಒಬ್ಬನೇ ಒಬ್ಬ ಮುಸಲ್ಮಾನನನ್ನು ಕಣಕ್ಕಿಳಿಸಲಿಲ್ಲ. ಮುಸ್ಲಿಂ ಮತಗಳು ಹೇಗಿದ್ದೂ ನಮಗೆ ಬರುತ್ತವೆ ಎಂಬ ನಿರೀಕ್ಷೆಯೊಂದಿಗೆ ಹಿಂದೂ ಮತಗಳನ್ನು ಒಡೆಯಲು ಎಸ್ ಪಿ ಈ ಪ್ಲಾನ್ ಮಾಡಿಕೊಂಡಿದೆ. ಇದು  ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಸ್ಲಿಂ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಮಾಯಾವತಿ ಅವರು 17 ಮುಸ್ಲಿಮರನ್ನು ಅಖಾಡಕ್ಕೆ ಇಳಿಸಿದ್ದಾರೆ.

ಮುಸ್ಲಿಮರಿಗಿಲ್ಲ ಟಿಕೆಟ್..

ಪಶ್ಚಿಮ ಯುಪಿಯಲ್ಲಿ ಶೇ.26 ಮುಸ್ಲಿಮರಿದ್ದರೂ ಬಿಜೆಪಿ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಕಳೆದ ಚುನಾವಣೆಯಲ್ಲಿ ಇದೇ ತಂತ್ರವನ್ನು ಪ್ರಯೋಗಿಸಿದ್ದ ಬಿಜೆಪಿ 76 ಸ್ಥಾನಗಳಲ್ಲಿ 66 ಸ್ಥಾನಗಳನ್ನು ಗೆದ್ದಿತ್ತು. ಕೇವಲ ತನ್ನ ಹಿಂದುತ್ವದ ಶಕ್ತಿ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನೇ ನೆಚ್ಚಿಕೊಂಡಿರುವ ಬಿಜೆಪಿ ಈಗ ಜಾಟ್‌ ರನ್ನು ಸೆಳೆಯಲು ಪ್ಲಾನ್ ಮಾಡಿಕೊಳ್ಳುತ್ತಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಜಾಟ್ ರಾಜ ರಾಜ ಮಹೇಂದ್ರ ಪ್ರತಾಪ್ ಸಿಂಗ್ ಅವರ ಸ್ಮರಣಾರ್ಥ ವಿಶ್ವವಿದ್ಯಾನಿಲಯಕ್ಕೆ ಅಡಿಪಾಯ ಹಾಕಿದ್ರು. ಆ ಮೂಲಕ ಜಾಟ್ ಮತಗಳ ಸೆಳೆಯಲು ಕೇಸರಿ ಪಡೆ ಪ್ಲಾನ್ ಮಾಡಿದೆ.

ಇದಲ್ಲದೆ ಪಶ್ಚಿಮ ದೆಹಲಿ ಸಂಸದ ಪರ್ವೇಜ್ ಸಿಂಗ್ ವರ್ಮಾ ಅವರ ಮನೆಯಲ್ಲಿ ಪಶ್ಚಿಮ ಯುಪಿಯ 200 ಜಾಟ್ ನಾಯಕರೊಂದಿಗೆ ನಡೆದ ಸಭೆಯಲ್ಲಿ ಅಮಿತ್ ಶಾ ಭಾಗಿಯಾಗಿದ್ದರು. ಅವರು ಆರ್‌ಎಲ್‌ಡಿ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿ ಚುನಾವಣೆಯ ನಂತರ ರಾಜಿ ಮಾಡಿಕೊಳ್ಳಲು ಸಿದ್ಧ ಎಂದಿದ್ದಾರಂತೆ.

ಇನ್ನು ಪ್ಲಾನ್-ಬಿ ಅಡಿಯಲ್ಲಿ, ಬಿಜೆಪಿ ಪಶ್ಚಿಮ ಯುಪಿಯಲ್ಲಿ ಪ್ರಬಲವಾಗಿರುವ ಶೈನಿ, ಪಾಲ್, ಕಶ್ಯಪ್‌ ಮತ್ತು ಪ್ರಜಾಪತಿಗಳ ಮತಗಳನ್ನು ಅಭಿವೃದ್ಧಿಯ ಮಂತ್ರದೊಂದಿಗೆ ತನ್ನತ್ತ  ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ.

Tags: #Saaksha TVBSPCongressSPupelection
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram