ಅಖಿಲೇಶ್ ಸೇಡಿನ ರಾಜಕಾರಣ ನಡೆಸುತ್ತಿದ್ದಾರೆ- ವರ್ಚುಯಲ್ ರ್ಯಾಲಿಯಲ್ಲಿ ಮೋದಿ ವಾಗ್ದಾಳಿ.
ಅಖಿಲೇಶ್ ಯಾದವ್ ಅವರಿಂದ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ರ್ಯಾಲಿ ಮೂಲಕ ಕಾರ್ಯಕರ್ತರು ಹಾಗೂ ಮತದಾರರನ್ನುದ್ದೇಶಿಸಿ ಮಾತನಾಡಿದರು.
ಈ ವೇಳೆ ಮಾಜಿ ಸಿಎಂ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ವಿಪಕ್ಷಗಳು ಮುಂದಾಗಿವೆ. ಅದಕ್ಕಾಗಿ ಮತದಾರರನ್ನ ಪ್ರೇರೇಪಿಸುತ್ತಿವೆ ಎಂದು ಟೀಕೆ ಮಾಡಿದರು.
ಐದು ವರ್ಷಗಳಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೀಡಿದ ಜನಪರ ಅಭಿವೃದ್ಧಿ ಕಾರ್ಯಗಳಿಂದ ಭಯಗೊಂಡಿರುವ ವಿಪಕ್ಷಗಳು ಸೇಡು ತೀರಿಸಿಕೊಳ್ಳಲು ಮುಂದಾಗಿವೆ ಎಂದರು. ಶಾಮ್ಲಿ, ಮುಜಾಫರ್ನಗರ, ಬಾಗ್ಪತ್, ಸಹರಾನ್ಪುರ್, ಗೌತಮ್ ಬುದ್ಧ ನಗರದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ “ಉತ್ತರ ಪ್ರದೇಶದಲ್ಲಿ ನಾವು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಪ್ರತಿಪಕ್ಷಗಳು ಇದಕ್ಕೆ ವಿರುದ್ಧವಾಗಿವೆ. ಗಲಭೆ ಸೃಷ್ಟಿಸುವ ಮನಸ್ಥಿತಿ ಹೊಂದಿರುವ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಂಡು ಟಿಕೆಟ್ ನೀಡಿವೆ ಎಂದು ವಾಗ್ದಾಳಿ ನಡೆಸಿದರು.








