ಡಿ ಬಾಸ್ ಜೊತೆ ಪುಣ್ಯ ಕೆಲಸದಲ್ಲಿ ಕೈ ಜೊಡಿಸಿದ ರಿಯಲ್ ಸ್ಟಾರ್..!
ಕೊರೊನಾ ಸಂಕಷ್ಟ , ಲಾಕ್ ಡೌನ್ ನಿಂದಾಗಿ ಕೇವಲ ಮನುಷ್ಯರು ಅಷ್ಟೇ ಅಲ್ಲದೇ ಪ್ರಾಣಿ ಪಕ್ಷಿಗಳು ಸಂಕಷ್ದಲ್ಲಿ ಸಿಲುಕಿವೆ.. ರಾಜ್ಯದ 9 ಮೃಗಾಲಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ.. ಹೀಗಾಗಿ ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಅಭಿಮಾನಿಗಳು , ಹಾಗೂ ಇತರರಿಗೆ ಮೃಗಾಲಯಗಳಿಗೆ ನೆರವಾಗಿ ಪ್ರಾಣಿಗಳನ್ನ ದತ್ತು ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು..
ಡಿ ಬಾಸ್ ನೀಡಿದ್ದ ಒಂದೇ ಕರೆಗೆ ಪ್ರಾಣಿಗಳ ದತ್ತು ಪಡೆಯಲು ಅಭಿಮಾನಿಗಳು ಮುಗಿಬಿದ್ದಿದ್ದರು. ಅಷ್ಟೇ ಅಲ್ಲ ಸಿನಿಮಾ ತಾರೆಯರು ಸಹ ಪ್ರಾಣಿಗಳನ್ನ ದತ್ತು ಪಡೆಯುರತ್ತಿದ್ದಾರೆ. ಅಭಿಮಾನಿಗಳು ರಾಜ್ಯದ್ಯಂತ ಮೃಗಾಲಯಗಳಲ್ಲಿ ಪ್ರಾಣಿಗಳನ್ನ ದತ್ತು ಪಡೆಯುತ್ತಾ ಇದ್ದಾರೆ. ಈ ನಡುವೆ ದಚ್ಚು ಕಾಯಕಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಥ್ ಕೊಟ್ಟಿದ್ದಾರೆ.. ಹೌದು.. ಮೈಸೂರಿನ ಜಯಚಾಮರಾಜೇಂದ್ರ ಮೃಘಾಲಯದಿಂದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದು ದರ್ಶನ್ ಮನವಿಗೆ ಸ್ಪಂದಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಉಪೇಂದ್ರ, ‘ಪ್ರಾಣಿಗಳೇ ಗುಣದಲಿ ಮೇಲು…. ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಘಾಲಯ ದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು ಈ ಮೂಲಕ ದರ್ಶನ್ ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ’ ಎಂದಿದ್ದಾರೆ.
ಉಪೇಂದ್ರ ಅವರ ಕಾರ್ಯವನ್ನು ಪ್ರಶಂಸಿರುವ ನಟ ದರ್ಶನ್, ‘ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಶ್ರೀ ಉಪೇಂದ್ರ ಅವರಿಗೆ ಹೃದಯಪೂರ್ವಕ ಧನ್ಯವಾದಗಳು’ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.