ರೈತರು ಇರುವ ಜಾಗಕ್ಕೇ ಬಂದು ಬೆಳೆ ಖರೀದಿ – ಉಪೇಂದ್ರ
ಬೆಂಗಳೂರು: ಕೋವಿಡ್ 2ನೇ ಅಲೆ ತಡೆಗೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.. ಇದರಿಂದಾಗಿ ಬಡವರು ಸಂಕಷ್ಕ್ಕೆ ಸಿಲುಕಿದ್ದಾರೆ. ಈ ನಡುವೆ ಅನೇಕ ಸೆಲೆಬ್ರಿಟಿಗಳು ಜನರಿಗೆ ಸಹಾಯ ಮಾಡ್ತಿದ್ದಾರೆ. ಅದ್ರಲ್ಲಿ ಸ್ಯಾಂಡಲ್ ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಸಹ ಒಬ್ಬರು.. ಸಿನಿಮಾ ಕಾರ್ಮಿಕರಿಗೆ ದಿನಸಿ ಕಿಟ್ಗಳನ್ನು ನೀಡಿ ಮಾನವೀಯತೆ ಮೆರೆದಿದ್ದ ಉಪೇಂದ್ರ ಅವರು ಇದೀಗ ರೈತರು ಬೆಳೆದಿರುವ ಬೆಳೆಗೆ ಸೂಕ್ತ ಬೆಲೆ ಕೊಟ್ಟು ಖರೀದಿ ಮಾಡಲು ತಯಾರಿ ನಡೆಸಿದ್ದಾರೆ.
ಲಾಕ್ಡೌನ್ ನಿಂದ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರಿಂದ ತರಕಾರಿ ಖರೀದಿಸಿ ಅವಶ್ಯಕತೆ ಇರುವವರಿಗೆ ಹಂಚಲು ಮುಂದಾಗಿದ್ದಾರೆ. ಈ ವಿಚಾರವನ್ನು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ. ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರ ಬೆಳೆಗಳನ್ನು ಎಲ್ಲಿ ಬೆಳದಿದ್ದಾರೊ ಅವರಿರುವ ಜಾಗಕ್ಕೆ ತೆರಳಿ ಅಲ್ಲಿಂದ ಸೂಕ್ತ ಬೆಲೆ ಖರೀದಿಸಿ ಅಗತ್ಯವಿರುವವರಿಗೆ ಸಹಾಯ ಮಾಡುತ್ತೇವೆ.
ಕರೆ ಮಾಡಿ ಎಂದು ದೂರವಾಣಿ ಸಂಖ್ಯೆಯನ್ನು ಕೊಟ್ಟಿದ್ದಾರೆ. ರೈತರು ಸರಿಯಾದ ಮಾಹಿತಿಯನ್ನ ಹಂಚಿಕೊಂಡರೆ ಉಪೇಂದ್ರ ಅವರು ಬೆಳೆಯನ್ನು ಕೊಂಡು ಅಗತ್ಯ ಇರುವವರಿಗೆ ಸಹಾಯ ಮಾಡಲಿದ್ದಾರೆ. ಉಪೇಂದ್ರ ಅವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗ್ತಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.