UPSC ಪರೀಕ್ಷೆ ಫಲಿತಾಂಶ ಪ್ರಕಟ – ಕರ್ನಾಟಕದ 18 ಮಂದಿ ತೇರ್ಗಡೆ
UPSC 2020ನೇ ಸಾಲಿನ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆ ಬರೆದ ಕರ್ನಾಟಕದ 18 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನೂ ಮೊದಲ ರ್ಯಾಂಕ್ ನಲ್ಲಿ ಶುಭಂ ಕುಮಾರ್, 2ನೇ ರ್ಯಾಂಕ್ ನಲ್ಲಿ ಜಾಗೃತಿ ಅವಸ್ಥಿ, 3ನೇ ಸ್ಥಾನದಲ್ಲಿ ಅಂಕಿತಾ ಜೈನ್ ಇದ್ದು, ಮೂವರೂ ಕೂಡ ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ.
ಪುರುಷರು ಮತ್ತು 216 ಮಹಿಳೆಯರು ಸೇರಿದಂತೆ ಒಟ್ಟು 761 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವಿವಿಧ ನಾಗರಿಕ ಸೇವೆಗಳಿಗೆ ಸೇರ್ಪಡೆ ಆಗಲಿದ್ದಾರೆ. ಐಎಎಸ್, ಐಎಫ್ಎಸ್, ಐಪಿಎಸ್ ಅಧಿಕಾರಿ ಹುದ್ದೆ ಸೇರಿದಂತೆ ಇತರ ಹುದ್ದೆಗಳ ನೇಮಕಾತಿಗಾಗಿ 2020ರ ಅಕ್ಟೋಬರ್ 4ರಂದು ನಡೆದಿದ್ದ ಪ್ರಿಲಿಮ್ಸ್ ಪರೀಕ್ಷೆಯಲ್ಲಿ 4,82,770 ಅಭ್ಯರ್ಥಿಗಳು ಹಾಜರಾಗಿದ್ದರು.
ಈ ಪೈಕಿ 10, 564 ಅಭ್ಯರ್ಥಿಗಳು 2021ರ ಜನವರಿಯಲ್ಲಿ ನಡೆದಿದ್ದ ಮುಖ್ಯ ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದಿದ್ದರು. ಈ ಪೈಕಿ 2, 053 ಅಭ್ಯರ್ಥಿಗಳು ಮೌಖಿಕ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿಯನ್ನು 15 ದಿನಗಳೊಳಗೆ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಯುಪಿಎಸ್ಸಿ ಪ್ರಕಟಣೆ ತಿಳಿಸಿದೆ.








