ಕೊರಟಗೆರೆ: ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರು ಕೊರಟಗೆರೆ ಕ್ಷೇತ್ರದ ಎಲ್ಲ ಹೋಬಳಿ ಕೇಂದ್ರಗಳಿಗೆ ಭೇಟಿ, ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ ಹೊರಗಿನಿಂದ ತಾಲೂಕಿಗೆ ಬಂದವರ ಮಾಹಿತಿ, ಅಂಕಿ- ಅಂಶ ನೀಡದ ಕಾರಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. `ಹೇ.. ನಾನು ಕೇಳಿದಕ್ಕಷ್ಟೇ ಉತ್ತರ ಕೊಡ್ರಿ. ಇಲ್ಲಿಯವರೆಗೂ ಏನೇನ್ ಮಾಡಿದ್ದೀರಿ ಅಂಕಿ ಅಂಶ ಕೊಡಿ. ಯೂಸ್ಲೆಸ್ ಫೆಲೊಸ್ ತಂದು’ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.
20 ದಿನಗಳ ಹಿಂದೆ ಕ್ಷೇತ್ರಕ್ಕೆ ಬಂದಾಗ 9 ಸಾವಿರ ಜನ ತಾಲೂಕಿಗೆ ಬೇರೆ ಬೇರೆ ಕಡೆಯಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಲಾಗಿತ್ತು. ಬಂದವರ ವೈಯಕ್ತಿಕ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದರೂ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಬಂದವರ ಹೆಸರು, ವಿಳಾಸ, ಅಂಕಿ ಅಂಶಗಳನ್ನು ನೀಡದ ಕಾರಣ ಕೋಪಗೊಂಡ ಶಾಸಕರು, ‘ಅಧಿಕಾರಿಗಳು ಈ ಸಂದರ್ಭದಲ್ಲಿ ಬೇಜವಾಬ್ದಾರಿ ತೋರಿದರೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.