ಉತ್ತರ ಪ್ರದೇಶ : ಸರಣಿ ರಸ್ತೆ ಅಪಘಾತದಲ್ಲಿ 10 ಮಂದಿ ದುರ್ಮರಣ
ಮೊರಾದಾಬಾದ್ ಜಿಲ್ಲೆಯ ನಾನ್ಪುರದಲ್ಲಿ ದುರಂತ
ದಟ್ಟವಾದ ಮಂಜು ಕವಿಡ ವಾತಾವರಣವೇ ಅಪಘಾತಕ್ಕೆ ಕಾರಣ
ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ
ಉತ್ತರ ಪ್ರದೇಶ : ಟ್ರಕ್, ಕಾರು ಹಾಗೂ ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸರಣಿ ಅಪಘಾತದಲ್ಲಿ 10 ಮಂದಿ ಮೃತಪಟ್ಟು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ನಾನ್ಪುರದಲ್ಲಿ ದುರಂತ ನಡೆದಿದೆ.
ದಟ್ಟವಾದ ಮಂಜು ಕವಿಡ ವಾತಾವರಣವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೆÇಲೀಸರು ದೌಡಾಯಿಸಿ ಮೃತದೇಹಗಳನ್ನು ಹೊರಕ್ಕೆ ತೆಗೆದು, ವಾಹನಗಳನ್ನು ತೆರವುಗೊಳಿಸಿದ್ದಾರೆ.
ಇನ್ನು ಈ ಘಟನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.