Uttar Pradesh | ನಿಂತಿದ್ದ ಬಸ್ಗೆ ಟ್ರಕ್ ಡಿಕ್ಕಿ; 4 ಜನ ಸಾವು!
ರಸ್ತೆ ಬದಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ
ಘಟನೆಯಲ್ಲಿ 4 ಜನ ಸಾವು, ಹಲವರಿಗೆ ಗಾಯ
ಉತ್ತರ ಪ್ರದೇಶದ ಬಾರಾಬಂಕಿ ಬಳಿ ಘಟನೆ
ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲು
ಉತ್ತರ ಪ್ರದೇಶ : ರಸ್ತೆ ಬದಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನ ಮೃತಪಟ್ಟು, ಹಲವರಿಗೆ ಗಾಯಗಳಾಗಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯ ರಾಮನಗರದಲ್ಲಿ ನಡೆದಿದೆ.
ಇಂದು ಮುಂಜಾನೆ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಟ್ರಕ್ ರಸ್ತೆಯಲ್ಲಿ ನಿಂತಿದ್ದ ಡೆಕ್ಕರ್ ಬಸ್ ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಸ್ಥಳದಲ್ಲಿಯೇ ನಾಲ್ಕು ಜನರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಸುಮಾರು 14 ಮಂದಿಗೆ ಗಂಭೀರವಾದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಟ್ರಾಮಾ ಸೆಂಟರ್ ಗೆ ದಾಖಲು ಮಾಡಲಾಗಿದೆ. ಬಸ್ ನಲ್ಲಿ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದರಂತೆ. ಇವರು ನೇಪಾಳದಿಂದ ಗೋವಾಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.