ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಅಖಿಲೇಶ್ ಯಾದವ್
ಉತ್ತರಪ್ರದೇಶ : ಮುಂದಿನ ವರ್ಷ ( 2022) ದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ , ಬಿಎಸ್ ಪಿ ಸೇರಿದಂತೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸಿಕೊಳ್ತಿವೆ. ಬಿಜೆಪಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ , ಭರವಸೆಗಳ ಸುರಿಗಳೆ ಗೈಯ್ಯುತ್ತಾ ಜನರ ಗಮನ ಸೆಳೆಯುತ್ತಾ ಪ್ರಚಾರ ಶುರು ಮಾಡಿದೆ. ಆದ್ರೆ ಯುಪಿ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಪಕ್ಷದ ಮೈತ್ರಿಯೊಂದಿಗೆ ಈ ಚುನಾವಣೆ ಎದುರಿಸುವುದು ಅಂತಿಮಗೊಂಡಿದೆ ಎಂದು ತಿಳಿಸಿದ್ದಾರೆ. ಆರ್ಎಲ್ಡಿ ಪಕ್ಷದೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳುವ ವಿಚಾರ ಅಂತಿಮಗೊಂಡಿದೆ. ಸೀಟು ಹಂಚಿಕೆ ಮಾತ್ರ ಬಾಕಿ ಉಳಿದಿದೆ ಎಂದು ಅಖಿಲೇಶ್ ಅವರು ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.