‘ಹೆಚ್ಚು ಮಾತನಾಡಿದ್ರೆ ನನ್ನ ವಿರುದ್ಧವೂ ದೇಶದ್ರೋಹದ ಕೇಸ್ ದಾಖಲಾಗಬಹುದು’ ಯೋಗಿ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಕಿಡಿ..!
ಉತ್ತರಪ್ರದೇಶ: ಕೋವಿಡ್ ನಿರ್ವಹಣೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಅವರ ಪಕ್ಷದ ಶಾಸಸಕರೇ ಅಸಮಾಧಾನ ಹೊರಹಾಕಿದ್ದಾರೆ. ಹೌದು… ನಾನು ಹೆಚ್ಚು ಮಾತನಾಡಿದರೇ ನನ್ನ ವಿರುದ್ಧವೂ ದೇಶದ್ರೋಹದ ಪ್ರಕರಣ ದಾಖಲಿಸುತ್ತಾರೆ ಎಂದು ಶಾಸಕ ರಾಕೇಶ್ ರಾಥೋಡ್ ಆಕ್ರೋಶ ಹೊರಹಾಕಿದ್ದಾರೆ.
ಶಾಸಕರಿಗೆ ಪಕ್ಷದಲ್ಲಿ ಯಾವುದೇ ಹೆಚ್ಚಿನ ಸ್ಥಾನಮಾನವಿಲ್ಲ. ನಾವು ಮಾಧ್ಯಮಗಳಿಗೆ ಹೇಳಿಕೆ ನೀಡಿದರೇ, ಮಾತನಾಡಿದರೇ ನಮ್ಮ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಬಹುದು ಎಂದು ಕಿಡಿಕಾರಿದ್ದಾರೆ. ಸೀತಾಪುರದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ ಮತ್ತೆ ಕಾರ್ಯಗತಗೊಳಿಸುವ ಬಗ್ಗೆ ಮಾತನಾಡಿದ ಶಾಸಕ ರಾಕೇಶ್ ರಾಥೋಡ್, ನಾನು ನನ ಕೈಲಾದಷ್ಟು ಪ್ರಯತ್ನಪಟ್ಟಿದ್ದೇನೆ. ಹಲವು ಕ್ರಮಕೈಗೊಂಡಿದ್ದೇನೆ. ಆದರೆ ಶಾಸಕರಿಗೆ ಪಕ್ಷದಲ್ಲಿ ಎಷ್ಟು ಸ್ಥಾನಮಾನವಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೆಚ್ಚು ಮಾತನಾಡಿದ್ದಲ್ಲಿ ದೇಶದ್ರೋಹ ಆರೋಪ ಹೊರಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ಧಾರೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








