ವೃಂದಾವನ-ಮಥುರಾದ 10 ಚದರ ಕಿಮೀ ಪ್ರದೇಶದಲ್ಲಿ ಮದ್ಯ – ಮಾಂಸ ಮಾರಾಟ ನಿಷೇಧ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
ವೃಂದಾವನ-ಮಥುರಾದ 10 ಚದರ ಕಿಮೀ ಪ್ರದೇಶದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗುವಂತೆ ಆದೇಶ ಹೊರಡಿಸಿದ್ದಾರೆ.
ಈ ಸ್ಥಳವನ್ನ ತೀರ್ಥ ಕೇತ್ರವೆಂದೇ ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ.
ಈ ಪ್ರದೇಶದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಮುನ್ನ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಮಥುರಾ-ಬೃಂದಾವನದಲ್ಲಿರುವ ಶ್ರೀಕೃಷ್ಣನ ಜನ್ಮಸ್ಥಳವನ್ನು 10 ಚದರ ಕಿಮೀ ಪ್ರದೇಶವನ್ನು ತೀರ್ಥಕ್ಷೇತ್ರವೆಂದು ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಈ ಪ್ರದೇಶದಲ್ಲಿ ಒಟ್ಟು 22 ನಗರ ನಿಗಮ ವಾರ್ಡ್ಗಳಿವೆ.
ಯುಪಿ ಸರ್ಕಾರ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸುವುದಾಗಿ ಘೋಷಿಸಿದ ಒಂದು ವಾರದ ನಂತರ ಈ ಘೋಷಣೆ ಬಂದಿದೆ.
ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸಂಬಂಧಿತ ಅಧಿಕಾರಿಗಳಿಗೆ ನಿಷೇಧಕ್ಕೆ ಯೋಜನೆಗಳನ್ನು ರೂಪಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ನಿರ್ಧಾರವನ್ನು ದೃಢೀಕರಿಸುವಾಗ ಮದ್ಯದ ಮತ್ತು ಮಾಂಸದ ವ್ಯಾಪಾರದಲ್ಲಿ ತೊಡಗಿರುವವರು ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಸಲಹೆ ನೀಡಿದ್ದರು.
ಅಲ್ಲದೇ ಈ ಸ್ಥಳ ಇದು ಬೃಹತ್ ಪ್ರಮಾಣದ ಪ್ರಾಣಿ ಹಾಲನ್ನು ಉತ್ಪಾದಿಸಲು ಹೆಸರುವಾಸಿಯಾಗಿದೆ.
ಕಳೆದ ತಿಂಗಳು ಮಥುರೆಗೆ ಭೇಟಿ ನೀಡಿದಾಗ, ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ತೊಡೆದುಹಾಕಲು ಶ್ರೀಕೃಷ್ಣನನ್ನು ಆದಿತ್ಯನಾಥ್ ಪ್ರಾರ್ಥಿಸಿದರು.
ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಮತ್ತು ಇದಕ್ಕಾಗಿ ಯಾವುದೇ ಹಣದ ಕೊರತೆ ಎದುರಾಗದಂತೆ ಆಧುನಿಕ ತಂತ್ರಜ್ಞಾನದೊಂದಿಗೆ ಈ ಪ್ರದೇಶದ ಅಭಿವೃದ್ಧಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಜೊತೆಗೆ ಅಭಿವೃದ್ಧಿ ಪಡಿಸುವ ಭರವಸೆ ನೀಡಿದ್ದರು.








