uttarapradesha
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಮಹಿಳೆಯರ ಮೇಲಿನ ದೌರನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹತ್ರಾಸ್ ರೇಪ್ ಕೇಸ್ ಬೆನ್ನಲ್ಲೇ ಮತ್ತೊಂದು ಭೀಕರ ಘಟನೆ ನಡೆದಿದೆ. ಲೈಂಗಿಕ ಕ್ರಿಯೆಗೆ ಒಪ್ಪದ 15 ವರ್ಷದ ಬಾಲಕಿಗೆ ಆಕೆಯ ಪ್ರೇಮಿ ಬೆಂಕಿ ಹಚ್ಚಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ.
21 ವರ್ಷದ ಕೃಷ್ಣ ಗುಪ್ತ ಎಂಬಾತ ಈ ದುಷ್ಕೃತ್ಯ ಎಸಗಿಸದ್ದು, ಆತನನ್ನು ಸದ್ಯ ಬಂಧಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
13 ವರ್ಷದ ಪ್ರೀತಿ, ಗರ್ಭಪಾತ ಮಾಡಿಸಿದ ಕಿರಾತಕ, ಮದುವೆ ದಿನವೇ ವರ ಎಸ್ಪೇಪ್..!
ಆದ್ರೆ ದುರಾದೃಷ್ಟವಶಾತ್ ಬಾಲಕಿ ವಾರಾಣಸಿಯ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ. ಇನ್ನೂ ನಿರಂತರವಾಗಿ ಬಾಲಕಿಗೆ ಲೈಂಗಿಕ ಕ್ರಿಯೆಗೆ ಕಿರುಕುಳ ನೀಡ್ತಿದ್ದ. ಆದ್ರೆ ಆಕೆ ಒಪ್ಪದ ಕಾರಣ , ಮನೆಯಿಂದ ಎಳೆದೊಯ್ದು ಬೆಂಕಿ ಹಚ್ಚಿದ್ದಾನೆ ಎಂದು ಬಾಲಕಿಯ ತಂದೆ ಆರೋಪಿಸಿದ್ದಾರೆ. ಈ ಸಂಬಂಧ ಯುವತಿಯ ತಂದೆ ದೂರು ದಾಖಲಿಸಿದ್ದು, ಆರೋಪಿಯ ವಿರುದ್ಧ ಐಪಿಸಿ, ಎಸ್ ಸಿ/ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪೋಸ್ಕೋ ಕಾಯ್ದೆಯಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದುಭಾರ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
uttarapradesha
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel