ಲಖನೌ: ಉತ್ತರಪ್ರದೇಶದ ಸೋನಾಭದ್ರ ಜಿಲ್ಲೆಯ ಹರದಿ ಗ್ರಾಮದ ಸಮೀಪ ಸುಮಾರು 3 ಸಾವಿರ ಟನ್ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. 2005ರಲ್ಲಿಯೇ ಭಾರತೀಯ ಭೂವೈಜ್ಞಾನಿಕ ಸಮಿಕ್ಷೆ ಇಲ್ಲಿ ಅಧ್ಯಯನ ನಡೆಸಿ ಈ ಜಾಗದಲ್ಲಿ ಚಿನ್ನದ ಗಣಿ ಇರುವ ಬಗ್ಗೆ ಸ್ಪಷ್ಟನೆ ನೀಡಿತ್ತು. ಅಲ್ಲದೇ ಈ ಬಗ್ಗೆ 2012ರಲ್ಲಿಯೂ ಕೂಡ ಚಿನ್ನದ ನಿಕ್ಷೇಪ ಇರುವ ಬಗ್ಗೆ ಮತ್ತೊಮ್ಮೆ ದೃಢೀಕರಣ ನೀಡಿತ್ತು. ಈ ವಿಷಯವಾಗಿ ಯಾವುದೇ ಕೆಲಸಗಳು ಶುರುವಾಗಿರಲಿಲ್ಲ. ಆದ್ರೆ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದ ಮೇಲೆ ಚಿನ್ನದ ನಿಕ್ಷೇಪಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ವೇಗ ನೀಡಲಾಯಿತು. ಪರಿಣಾಮವಾಗಿ ಸೋನಾಭದ್ರ ಜಿಲ್ಲೆಯಲ್ಲಿ ಸುಮಾರು 3 ಸಾವಿರ ಟನ್ ಬಂಗಾರದ ನಿಕ್ಷೇಪವಿರುವುದು ದೃಢಪಟ್ಟಿದ್ದು ಹರಾಜು ಪ್ರಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ. ಸದ್ಯ ಹರಾಜು ಪ್ರಕ್ರಿಯೆ ನಡೆಸಲು ಸರ್ಕಾರದಿಂದ 7 ಸದಸ್ಯರ ಟೀಮ್ ರೆಡಿಯಾಗಿದೆ.
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...








