V Somanna : ನಾ ಕಂಡ ನವ ಗೋವಿಂದರಾಜನಗರ ನಿರ್ಮಾಣದ ಕನಸು ನನಸಾಗಿದೆ..!!
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗೋವಿಂದರಾಜನಗರ ವಾರ್ಡ್ ನಲ್ಲಿಂದು ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ವಿ.ಸೋಮಣ್ಣ ರವರು ಸ್ಥಳ ಪರಿವೀಕ್ಷಣೆ ನಡೆಸಿದರು.
ಟೆಲಿಪೋನ್ ಎಕ್ಸ್ ಚೇಂಜ್ ನಿಂದ
ಕಾಲ್ನಡಿಗೆ ಮೂಲಕವೇ ತೆರಳಿದ ಸಚಿವರು ಅಗ್ರಹಾರ ದಾಸರಹಳ್ಳಿ ರಸ್ತೆ ಕಾಮಗಾರಿ ಕೈಗೊಂಡಿರುವ ಸ್ಥಳವನ್ನು ಪರಿವೀಕ್ಷಣೆ ನಡೆಸಿದರು.
ತದನಂತರ ದಾಸರಹಳ್ಳಿ ವಾರ್ಡ್ ನಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪರಿಶೀಲಿಸಿದರು.
ಶರವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ ಗೋವಿಂದರಾಜನಗರ ಕ್ಷೇತ್ರ
ಸ್ಥಳ ಪರಿವೀಕ್ಷಣೆ ಬಳಿಕ ಮಾತನಾಡಿದ ಸಚಿವರು ದಾಸರಹಳ್ಳಿ ವಾರ್ಡ್ ನಲ್ಲಿ ಸಜ್ಜಾಗುತ್ತಿರುವ 290 ಹಾಸಿಗೆ ಸಾಮ್ಯರ್ಥವುಳ್ಳ ಆಸ್ಪತ್ರೆ ಮುಂದಿನ ತಿಂಗಳು ಸನ್ಮಾನ್ಯ ಮುಖ್ಯಮಂತ್ರಿಗಳ ಅಮೃತಹಸ್ತ ದಿಂದ ಲೋಕರ್ಪಣೆಯಾಗಲಿದೆ. ಜನರ ಆಶಯದಂತೆ, ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಜನರ ಸಹಕಾರದಿಂದ ಪ್ರತಿಯೊಂದು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕಳೆದ ನಾಲ್ಕುವರೆ ವರ್ಷದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಶರವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು.