V Somanna : ಜನಪರ ಆಡಳಿತ ನೀಡಿದ, ಜನರ ಸರ್ಕಾರ ನಮ್ಮದು -ಸಚಿವ ವಿ.ಸೋಮಣ್ಣ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜ್ ಕುಮಾರ್ ವಾರ್ಡ್ ನಲ್ಲಿರುವ
ವೆಸ್ಟ್ ಆಫ್ ಕಾರ್ಡ್ ರೋಡ್ ಫ್ಲೈ ಸ್ಥಳ ಪರಿವೀಕ್ಷಣೆಯನ್ನು ನಡೆಸಿ ಮಾತನಾಡಿದ ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ವಿ.ಸೋಮಣ್ಣ ರವರು ಬೆಳೆಯುತ್ತಿರುವ ನಗರಕ್ಕೆ ಸಮಸ್ಯೆಗಳು ಬರುವುದು ಸಹಜ. ಸಮಸ್ಯೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಶಾಶ್ವತವಾಗಿ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಿ ಜನರ ಜೀವನಮಟ್ಟ ಸುಧಾರಣೆ ಮಾಡಬೇಕು. ಜನಸಂಖ್ಯೆ ಹೆಚ್ಚಳ ಮತ್ತು ವಾಹನ ಸಂಚಾರ ಹೆಚ್ಚಳದಿಂದ ವೆಸ್ಟ್ ಆಫ್ ಕಾರ್ಡ್ ರೋಡ್ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದರ ನಿವಾರಣೆಗಾಗಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡು ಇದೀಗ ಅಂತಿಮ ಸ್ವರೂಪಕ್ಕೆ ಬರುತ್ತಿದೆ ಎಂದು ತಿಳಿಸಿದರು.
ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲ್ಸೇತುವೆಯಿಂದ ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ,ಮಹಾಲಕ್ಷ್ಮೀಲೇಔಟ್, ಆರ್.ಆರ್.ನಗರ, ಗೋವಿಂದರಾಜನಗರ, ವಿಜಯನಗರ ವಿಧಾನಸಭಾ ಕ್ಷೇತ್ರದ ನಾಗರಿಕರಿಗೆ ಸುಲಭ ಸಂಚಾರಕ್ಕೆ ಅನುಕೂಲವಾಗಲಿದೆ ಮತ್ತು ಟ್ರಾಫಿಕ್ ಕಿರಿಕಿರಿ ಇರುವುದಿಲ್ಲ ಮತ್ತು ಇಂಧನ ಸಹ ಉಳಿತಾಯವಾಗಲಿದೆ ಎಂದರು.
ಸಾರ್ವಜನಿಕರ ಕುಂದು-ಕೊರತೆ ನಿವಾರಣೆಯಾಗಬೇಕು ಎಂದು ಬಿ.ಜೆ.ಪಿ ಸರ್ಕಾರದ ಆಡಳಿತದಲ್ಲಿ ಸಾರ್ವಜನಿಕರ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಸಾವಿರಾರು ಕೋಟಿ ರೂಪಾಯಿ ಅಮೃತ್ ನವನಗರೋತ್ಥನದ ಅಡಿಯಲ್ಲಿ ಬೆಂಗಳೂರು ನಗರದ ಅಭಿವೃದ್ಧಿಗಾಗಿ ನೀಡಿದ್ದಾರೆ.
ಜನಪರ ಆಡಳಿತ ನೀಡಿದ, ಜನರ ಸರ್ಕಾರ ನಮ್ಮದು ಎಂದು ಹೆಮ್ಮೆಯಿಂದ ಹೇಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರಾದ ದೊಡ್ಡಯ್ಯ, ಕಾರ್ಯಪಾಲಕ ಅಭಿಯಂತರಾದ ಪ್ರಕಾಶ್, ಗೋವಿಂದರಾಜನಗರ ಮಂಡಲ ಬಿ.ಜೆ.ಪಿ ಅಧ್ಯಕ್ಷರಾದ ವಿಶ್ವನಾಥಗೌಡ ಉಪಸ್ಥಿತರಿದ್ದರು.