ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶದ ಏಕತೆಗಾಗಿ ಶ್ರಮಿಸಿದ ವೀರ ನೇತಾಜಿ ಸುಭಾಷ್ ಚಂದ್ರ ಬೋಸ್ 

Mahesh M Dhandu by Mahesh M Dhandu
January 23, 2022
in Newsbeat, State, ರಾಜ್ಯ
V Somanna subhash chandra bose jayantotsava saaksha tv
Share on FacebookShare on TwitterShare on WhatsappShare on Telegram

ದೇಶದ ಏಕತೆಗಾಗಿ ಶ್ರಮಿಸಿದ ವೀರ ನೇತಾಜಿ ಸುಭಾಷ್ ಚಂದ್ರ ಬೋಸ್

ಬೆಂಗಳೂರು : ನೇತಾಜಿ ಸುಭಾಸ್ ಚಂದ್ರ ಬೋಸ್ ಅಪ್ರತಿಮ ದೇಶಭಕ್ತ. ರಾಷ್ಟ್ರದ ಉದ್ದಗಲಕ್ಕೂ ಸಂಚರಿಸಿ ಭಾರತೀಯರ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸಿದವರು ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೇತಾಜಿ ಸುಭಾಷ್ ಚಂದ್ರ ಬೋಸ್ ಉದ್ಯಾನವನದಲ್ಲಿ‌ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ನಡೆದ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯೋತ್ಸವದಲ್ಲಿ ಹಾಗೂ ಪರಾಕ್ರಮ ದಿನದಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣದ ಹಂಗು ತೊರೆದು ಶ್ರಮಿಸಿದ ನೇತಾಜಿ ಅವರ ಜೀವನದ ಆದರ್ಶಗಳನ್ನು‌ ಮುಂದಿನ‌ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಭಾರತವನ್ನು ಬ್ರಿಟಿಷ್ ಮುಕ್ತರನ್ನಾಗಿಸಿ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ತಮ್ಮದೇ ಆದಂಥ ಉಪಾಯಗಳನ್ನು ಹೂಡಿ ಯಶಸ್ವಿಯಾಗಿದ್ದರು. ಇದರ ಪರಿಣಾಮವಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮೊದಲ ಬಾರಿಗೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟು ಅಲ್ಲಿ ತಿರಂಗಾ ಹಾರಿಸುವಲ್ಲಿ ಅವರು ಯಶಸ್ವಿಯಾಗಿದ್ದರು.

ನೇತಾಜಿ ಅವರ ಸಂದೇಶಗಳು ಇಂದಿಗೂ ಅನುಕರಣೀಯ. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಇಂಥ ಅನೇಕರ ತ್ಯಾಗ ಮತ್ತು ಬಲಿದಾನದಿಂದ ನಾವೆಲ್ಲ ಈವತ್ತು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಇನ್ನು, ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಘೋಷಿಸಿದ್ದಾರೆ. ಅಪ್ರತಿಮ ನಾಯಕರೊಬ್ಬರ ಪುತ್ಥಳಿ ನಿರ್ಮಿಸುವುದರ ಬಗ್ಗೆ ಹೇಳಿದ ಅವರಿಗೆ ಭಾರತ ಋಣಿಯಾಗಿದೆ. ನೇತಾಜಿ ಅವರ ಸ್ಮರಣೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನೇತಾಜಿ ಅವರ ಹೆಸರಿನ ಉದ್ಯಾನವನ ನಿರ್ಮಿಸಿ ಅವರ ಪುತ್ಥಳಿ ಸ್ಥಾಪಿಸುವ ಮೂಲಕ ಅಪ್ರತಿಮ ವೀರನಿಗೆ ಋಣಿಯಾಗಿದ್ದೇವೆ. ಇನ್ನು ಮುಂದಿನ ನೇತಾಜಿ ಜಯಂತ್ಯೋತ್ಸವದ ವೇಳೆಗೆ ಅವರ ನುಡಿಗಳ- ಸಾಧನೆಗಳ ಬಗ್ಗೆ ಪುಸ್ತಕ ಹೊರತಂದು ಲಕ್ಷಕ್ಕೂ ಅಧಿಕ ಜನತೆಗೆ ಉಚಿತವಾಗಿ ಹಂಚುವ ಕಾರ್ಯ ನಡೆಯಲಿದೆ ಎಂದು ಹೇಳಿದರು.

V Somanna subhash chandra bose jayantotsava saaksha tv

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮಾತನಾಡಿ ನೇತಾಜಿ ಅವರ‌ಮೇಲೆ ಬಹುಮುಖ್ಯವಾಗಿ ಪ್ರಭಾವ ಬೀರಿದವರು ಸ್ವಾಮಿ ವಿವೇಕಾನಂದರು. ಮಹಾತ್ಮ ಗಾಂಧಿ ಅವರಿಗೆ ನೇತಾಜಿ ಅವರ ಅಪ್ರತಿಮ ಶಕ್ತಿಯ ಬಗ್ಗೆ ಅದಮ್ಯ ನಂಬಿಕೆಯಿತ್ತು. ಆದರೆ ಗಾಂಧಿಯವರದ್ದು ಶಾಂತಿಪಥ, ನೇತಾಜಿಯವರದ್ದು ಕ್ರಾಂತಿಪಥ. ಸ್ವಾತಂತ್ರ್ಯ ಗಳಿಸಲು ರಕ್ತವನ್ನು ಬೇಕಿದ್ದರೂ ಕೊಡುತ್ತೇನೆ. ಸ್ವಾತಂತ್ರ್ಯ ಪುಕ್ಕಟೆಯಾಗಿ ದೊರಕುವಿದಲ್ಲ ಎಂದು ಹೇಳುವುದರ ಮೂಲಕ ದೇಶದ ಜನತೆಯನ್ನು ನೇತಾಜಿ ಬಡಿದೆಬ್ಬಿಸಿದ್ದರು.

ಬ್ರಿಟಿಷರನ್ನು‌ ಬಗ್ಗು ಬಡೆಯಲು ಕ್ರಾಂತಿಯ ಮಾರ್ಗವೇ ಸರಿ ಎಂದು ಹೋರಾಡಿದ ನೇತಾಜಿ ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದರು.

ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ನೇತಾಜಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ, ನಿವೃತ್ತ ಸೈನಿಕರಾದ ಶ್ರೀ ಧನಂಜಯ್ ಮತ್ತು ಶ್ರೀ ಕೃಷ್ಣಗೌಡರವರಿಗೆ ಸನ್ಮಾನಿಸಲಾಯಿತು.

ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಸೋಮಶೇಖರ್, ವಿ.ಸೋಮಣ್ಣ ಪ್ರತಿಷ್ಠಾನದ ಕೋಶಾಧ್ಯಕ್ಷ ಡಾ.ನವೀನ್ ಸೋಮಣ್ಣ, ಮಂಡಲ ಬಿ.ಜೆ.ಪಿ.ಅಧ್ಯಕ್ಷ ವಿಶ್ವನಾಥಗೌಡರು, ಹಿರಿಯ ರಾಜಕೀಯ ಮುಖಂಡರು, ಕನ್ನಡ ಪರ ಹೋರಾಟಗಾರರಾದ ಪಾಲನೇತ್ರ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶಿಲ್ಪ ಶ್ರೀಧರ್, ಶ್ರೀಧರ್, ಯುವ‌ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: #Saaksha TVSubhash Chandra Bosev somanna
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram