ಲಸಿಕೆ ಪಡೆದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೊದಲ ದಿನವೇ 62% ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಕೋವಿಡ್ ತಾಂತ್ರಿಕ ಸಮಿತಿಯ ಡಾ.ಸುದರ್ಶನ್ ಬಲ್ಲಾಳ್ ಲಸಿಕೆ ಪಡೆದಿದ್ದು, ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೀಗಾಗಿ ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯವರೆಗೂ ಸುರಕ್ಷತಾ ಕ್ರಮ ಪಾಲಿಸಬೇಕು ಎಂದರು.

ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುತ್ತಿದೆ. ಶೇ.70 ರಷ್ಟು ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಕಾರಣಾಂತರಗಳಿಂದ ಲಸಿಕೆ ಪಡೆಯದವರು ಮತ್ತೆ ಲಸಿಕೆ ಪಡೆಯಲು ಅವಕಾಶವಿದೆ ಸುಧಾಕರ್ ಹೇಳಿದ್ದಾರೆ.
ಅಮಿತ್ ಶಾ ಮೆಚ್ಚುಗೆ
ಬಿಜೆಪಿ ವರಿಷ್ಠರು ನಮ್ಮ ಸರ್ಕಾರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಮುಂದಿನ ಐದು ವರ್ಷವೂ ನಮ್ಮ ಸರ್ಕಾರ ಇರಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಹೇಳಿದರೆ ಅವರಿಗೆ ಮಾರ್ಕೆಟ್ ದೊರೆಯುತ್ತದೆ. ಯಾರು ಏನು ಹೇಳಿದರೂ ಅದನ್ನು ಸಾಬೀತುಮಾಡಬೇಕು ಎಂದು ಸುಧಾಕರ್ ತಿಳಿಸಿದ್ದಾರೆ.
ಪುಸ್ತಕ ಬಿಡುಗಡೆ
ಚಿಕ್ಕಬಳ್ಳಾಪುರದಲ್ಲಿ `ಹೊಳೆಯುವುದೆಲ್ಲಾ ಚಿನ್ನ’ ಪುಸ್ತಕ ಬಿಡುಗಡೆ ಮಾತನಾಡಿದ ಸಚಿವ ಸುಧಾಕರ್, ಬೆಳಗ್ಗೆ ಎದ್ದ ಕೂಡಲೇ ಮೊಬೈಲ್ ನೋಡುತ್ತೇವೆ. ಇದರಿಂದಾಗಿ ನಕಾರಾತ್ಮಕ ಚಿಂತನೆ ಹುಟ್ಟಿಕೊಳ್ಳುತ್ತದೆ. ಇದು ಜೀವನಶೈಲಿಗೆ ಮಾರಕವಾಗಿದೆ. ಮನುಷ್ಯನಿಗೆ ಯಾವುದರಲ್ಲೂ ಸಂತೃಪ್ತಿ ಸಿಗುವುದಿಲ್ಲ. ಅತಿ ಶ್ರೀಮಂತರಿಗೆ ಕೂಡ ತೃಪ್ತಿ ಸಿಗದೆ ಯಾವುದೋ ಒಂದು ಕೊರತೆಯಿಂದ ಬಳಲುತ್ತಿರುತ್ತಾರೆ. ಇದಕ್ಕಾಗಿ ಆಧ್ಯಾತ್ಮಿಕ ಜಗತ್ತಿನ ಸಲಹೆ ಪಡೆಯಬೇಕು ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








