ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಸಿಕೆ ಕೊರತೆ : ಎಲ್ಲಿಗೆ ಬಂತು ನಮೋ ಲಸಿಕಾ ಮಹಾಯಜ್ಞ..?

Mahesh M Dhandu by Mahesh M Dhandu
May 20, 2021
in Newsbeat, Saaksha Special, ಎಸ್ ಸ್ಪೆಷಲ್
narendra-modi
Share on FacebookShare on TwitterShare on WhatsappShare on Telegram

ಲಸಿಕೆ ಕೊರತೆ : ಎಲ್ಲಿಗೆ ಬಂತು ನಮೋ ಲಸಿಕಾ ಮಹಾಯಜ್ಞ..?

ನವದೆಹಲಿ : ಕೊರೊನಾ ಹೆಮ್ಮಾರಿ ಹೊಡೆತಕ್ಕೆ ದೇಶ ತತ್ತರಿಸಿ ಹೋಗಿದೆ. ಆರಂಭದಲ್ಲಿ ನಗರ ಪ್ರದೇಶದಲ್ಲಿ ತಾಂಡವವಾಡುತ್ತಿದ್ದ ಹೆಮ್ಮಾರಿ ಇದೀಗ ಗ್ರಾಮೀಣ ಪ್ರದೇಶಗಳಿಗೆ ಕೊಳ್ಳಿ ಇಡುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಈಗಗಾಲೇ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಇನ್ನೂ ಹಲವು ರಾಜ್ಯಗಳಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೂ ದೇಶದಲ್ಲಿ ಮಾತ್ರ ಕೊರೊನಾ ಅಬ್ಬರ ಮಾತ್ರ ಕಡಿಮೆ ಆಗುತ್ತಲೇ ಇಲ್ಲ. ಒಂದು ಕಡೆ ಸೋಂಕು ಹೆಚ್ಚಾಗುತ್ತಿದ್ದರೇ ಇನ್ನೊಂದೆಡೆ ಬೆಡ್, ಆಕ್ಸಿಜನ್ ಕೊರತೆ ಕೂಡ ಜನರ ಪ್ರಾಣ ತೆಗೆದುಕೊಳ್ಳುತ್ತಿದೆ.

Related posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

September 19, 2026
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026

ಎಲ್ಲಿಗೆ ಬಂತು ನಮೋ ಲಸಿಕಾ ಮಹಾಯಜ್ಞ..?

ಈ ಮಧ್ಯೆ ತಜ್ಞರು ಹೇಳುವ ಪ್ರಕಾರ ದೇಶದಲ್ಲಿ ಕೊರೊನಾಗೆ ಮೂಗುದಾರ ಹಾಕಬೇಕು ಅಂದ್ರೆ ಅದು ಲಸಿಕೆಯಿಂದ ಮಾತ್ರ ಸಾದ್ಯ. ಶೇಖಡಾ 80 ರಷ್ಟು ಜನರಿಗೆ ಲಸಿಕೆ ಹಾಕಿದರೇ ದೇಶದಲ್ಲಿ ಕೊರೊನಾ ಅಬ್ಬರವನ್ನು ತಡೆಯಬಹುದು ಎನ್ನುತ್ತಿದ್ದಾರೆ. ಆದ್ರೆ ವಾಸ್ತವದಲ್ಲಿ ಸರ್ಕಾರದ ಇದನ್ನ ಗಂಭೀರವಾಗಿ ತೆಗೆದುಕೊಂಡಂತೆ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಕೊವಿಡ್-19 ಲಸಿಕೆ ಪಡೆಯುವವರ ಸಂಖ್ಯೆ ಇಳಿಮುಖವಾಗುತ್ತಿರುವುದೇ ಅದಕ್ಕೆ ಸಾಕ್ಷಿಯಾಗಿದೆ.

ಅಂದಹಾಗೆ ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ ಇಂದಿಗೆ 124 ದಿನ ಕಳೆದಿದ್ದು, 18,69,89,265 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗಿದೆ.

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 70,12,752 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ.

ಭಾರತದಲ್ಲಿ ಈವರೆಗೂ 96,85,597 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,67,071 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ.

Vaccine shortage

1,46,34,130 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,56,235 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,83,40,325 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 94,34,731 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

60 ವರ್ಷ ಮೇಲ್ಪಟ್ಟ 5,49,33,136 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,80,25,288 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನ ಗಮನಿಸಿದರೇ ದೇಶದಲ್ಲಿ ಲಸಿಕಾ ಮಹಾಯಜ್ಞ ಆಮೆಗತಿಯಲ್ಲಿ ಸಾಗುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಕಳೆದ ಒಂದು ತಿಂಗಳಿನಿಂದ ದೇಶದ ಸಾಕಷ್ಟು ರಾಜ್ಯದಲ್ಲಿ ಲಸಿಕೆಯ ಕೊರತೆ ಎದುರಾಗಿದೆ. ನಮ್ಮ ರಾಜ್ಯದ ವಿಚಾರಕ್ಕೆ ಬಂದ್ರೆ ನಮ್ಮಲ್ಲಿ ಸದ್ಯಕ್ಕೆ ಎರಡನೇ ಡೋಸ್ ಪಡೆಯುವವರಿಗೆ ಹೆಚ್ಚು ಪ್ರಾಶಸ್ತ್ಯ ಕೊಡಲಾಗುತ್ತಿದೆ. ಲಸಿಕೆಯ ಕೊರತೆಯಿಂದಾಗಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ. ಸಾಕಷ್ಟು ವ್ಯಾಕ್ಸಿನ್ ಸೆಂಟರ್ ಗಳ ಮುಂದೆ ಔಟ್ ಆಫ್ ಸ್ಟಾಕ್ ಎಂಬ ಬೋರ್ಡ್‍ಗಳು ಕಾಣುತ್ತಿವೆ. ಲಸಿಕೆಗಾಗಿ ಜನರ ಗಂಟೆಗಟ್ಟಲೇ ಕಾದರು ಯಾವುದೇ ಪ್ರಯೋಜನಾ ಆಗುತ್ತಿಲ್ಲ.

corona cases

Tags: Corona VirusNarendra modivaccine
ShareTweetSendShare
Join us on:

Related Posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram