ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

800 ಕುರಿಗಳನ್ನು ಚೀನಾದ ರಾಯಭಾರ ಕಚೇರಿಗೆ ನುಗ್ಗಿಸಿ ಪ್ರತಿಭಟಿಸಿದ್ದ ವಾಜಪೇಯಿ

admin by admin
June 27, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

800 ಕುರಿಗಳನ್ನು ಚೀನಾದ ರಾಯಭಾರ ಕಚೇರಿಗೆ ನುಗ್ಗಿಸಿ ಪ್ರತಿಭಟಿಸಿದ್ದ ವಾಜಪೇಯಿ

ಹೊಸದಿಲ್ಲಿ, ಜೂನ್ 27: ಚೀನಾದ ಕುತಂತ್ರವನ್ನು ಜಗತ್ತಿನೆದುರು ಬಹಿರಂಗಪಡಿಸುವುದು ಸವಾಲಿನ ಕೆಲಸವೇ ಆಗಿದೆ. ಅಷ್ಟೇ ಅಲ್ಲ ಜಗತ್ತನ್ನು ಅಚ್ಚರಿಗೊಳಿಸುವಲ್ಲಿ ಚೀನಾ ಯಾವತ್ತೂ ವಿಫಲವಾಗಿಲ್ಲ. ಅದರಲ್ಲಿ ಮುಖ್ಯವಾಗಿ ತನ್ನ ದೇಶೀಯ ಹಾಗೂ ವಿದೇಶಿ ನೀತಿಗಳ ಮೂಲಕ ಭಾರತಕ್ಕೆ ಚೀನಾ ವಂಚಿಸುತ್ತಲೇ‌ ಬಂದಿದೆ. ಆದರೆ ಒಮ್ಮೆ 1965 ರಲ್ಲಿ ಯುವ ಸಂಸದೀಯ ಪಟು ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ ರಾಜಕೀಯ ಚಾಣಾಕ್ಷತನದಿಂದ ಚೀನಾವನ್ನು ಅಣಕಿಸಿದ್ದರು.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

1967 ರಲ್ಲಿ ಭಾರತದೊಂದಿಗೆ ಸೈನ್ಯದ ಮುಖಾಮುಖಿಗಾಗಿ ಚೀನಾ ಬಳಸಿದ ಅನೇಕ ನೆಪಗಳಲ್ಲಿ ಒಂದು ಭಾರತೀಯ ಸೈನಿಕರು ತನ್ನ ಕುರಿ ಮತ್ತು ಯಾಕ್‌ಗಳನ್ನು ಅಪಹರಿಸಿದ್ದಾರೆ ಎಂಬುದಾಗಿತ್ತು. ಚೀನಾ ಆಗಸ್ಟ್-ಸೆಪ್ಟೆಂಬರ್ 1965 ರಲ್ಲಿ ಈ ಘೋಷಣೆ ಮಾಡಿತು.
ಭಾರತದ ರಕ್ಷಣೆಯಲ್ಲಿದ್ದ ಸಿಕ್ಕಿಂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ತನ್ನ ಭೂಭಾಗವನ್ನು ಹೆಚ್ಚಿಸಿಕೊಳ್ಳಲು ಚೀನಾ ಹೊಂಚು ಹಾಕುತ್ತಿತ್ತು. ಅದೇ ಸಮಯದಲ್ಲಿ ‌ಕಾಶ್ಮೀರದೊಳಕ್ಕೆ ಪಾಕಿಸ್ಥಾನದಿಂದ ನುಸುಳುತ್ತಿದ್ದ ನುಸುಳುಕೋರರನ್ನು ಎದುರಿಸುವುದರಲ್ಲಿ ಭಾರತ ನಿರತವಾಗಿತ್ತು.
ಕೇವಲ ಮೂರು ವರ್ಷಗಳ ಹಿಂದೆ ಭಾರತವು ಯುದ್ಧದಲ್ಲಿ ಅವಮಾನಕರ ಸೋಲನ್ನು ಅನುಭವಿಸಿತ್ತು. ಚೀನಾ ಮತ್ತೊಮ್ಮೆ ಭಾರತಕ್ಕೆ 1962 ತರಹದ ಪಾಠವನ್ನು ಕಲಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿತ್ತು. ಆದರೆ ಚೀನಾದ ಲೆಕ್ಕಾಚಾರ ಭಾರತದ ಬಗ್ಗೆ ತಪ್ಪಾಗಿತ್ತು. ಯಾಕೆಂದರೆ ಭಾರತ 1962ರ ಪರಿಸ್ಥಿತಿಗಿಂತ ಹೆಚ್ಚಿನ ರೀತಿಯಲ್ಲಿ ಪರಿಸ್ಥಿತಿ ಎದುರಿಸಲು ಸಿದ್ಧವಾಗಿತ್ತು.

ಭಾರತೀಯ ಸೈನಿಕರು 800 ಕುರಿ ಮತ್ತು 59 ಯಾಕ್‌ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಚೀನಾ ಭಾರತೀಯ ಅಧಿಕಾರಿಗಳಿಗೆ ಪತ್ರ ಬರೆಯಿತು. ಭಾರತದ ಅಧಿಕಾರಿಗಳು ಇಂತಹ ಹಾಸ್ಯಾಸ್ಪದ ಆರೋಪವನ್ನು ನಿರಾಕರಿಸಿ ಪ್ರತ್ಯುತ್ತರ ನೀಡಿದರು. ಆದರೆ ಜನಸಂಘದ ಯುವ ಮುಖಂಡ 42ರ ಹರೆಯದ ವಾಜಪೇಯಿ ಮಾತ್ರ ಸುಮ್ಮನೆ ಕುಳಿತು ಕೊಳ್ಳಲಿಲ್ಲ. ಅವರು ಚೀನಾ ಉರಿದುಕೊಳ್ಳುವಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು!

ಅಟಲ್ ಬಿಹಾರಿ ವಾಜಪೇಯಿ 800 ಕುರಿಗಳ ಹಿಂಡಿನೊಂದಿಗೆ ಸೆಪ್ಟೆಂಬರ್ ಅಂತ್ಯದಲ್ಲಿ ನವದೆಹಲಿಯ ಚೀನಾ ರಾಯಭಾರ ಕಚೇರಿಗೆ ನೇರವಾಗಿ ಹೋದರು. ಕುರಿಗಳ ಕುತ್ತಿಗೆಯಲ್ಲಿ “ನನ್ನನ್ನು ತಿನ್ನಿರಿ ಆದರೆ ಜಗತ್ತನ್ನು ಉಳಿಸಿ” ಎಂದು ಫಲಕಗಳನ್ನು ನೇತು ಹಾಕಿ ಅವುಗಳನ್ನು ರಾಯಭಾರ ಕಚೇರಿಯ ಆವರಣದೊಳಕ್ಕೆ ನುಗ್ಗಿಸಿಬಿಟ್ಟರು .

ಇದು ಚೀನಾವನ್ನು ತೀವ್ರವಾಗಿ ಕೆರಳಿಸಿತು, ಚೀನಾ ಲಾಲ್ ಬಹದ್ದೂರ್ ಶಾಸ್ತ್ರಿ ನೇತೃತ್ವದ ಸರ್ಕಾರಕ್ಕೆ ಇನ್ನೊಂದು ಪತ್ರವನ್ನು ಬರೆದು, ವಾಜಪೇಯಿ ಅವರ ಪ್ರತಿಭಟನೆಯಿಂದ ಚೀನಾದ ರಾಷ್ಟ್ರಕ್ಕೆ ಅವಮಾನವಾಗಿದೆ ಮತ್ತು ಇದು ಶಾಸ್ತ್ರಿ ಸರ್ಕಾರದ ಬೆಂಬಲದೊಂದಿಗೆ ಸಂಭವಿಸಿದೆ ಎಂದು ಆರೋಪಿಸಿತು

ಚೀನಾದ ಪತ್ರಕ್ಕೆ ಭಾರತ, ದೆಹಲಿಯ ಹಲವಾರು ನಿವಾಸಿಗಳು ಸುಮಾರು 800 ಕುರಿಗಳನ್ನು ಮೆರವಣಿಗೆಯಲ್ಲಿ ಕರೆದೊಯ್ದರು. ಭಾರತದ ಪ್ರಾಧಿಕಾರಗಳಿಗೆ ಈ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲ. ಚೀನಾ ಭಾರತದ ವಿರುದ್ಧವಾಗಿ ಯುದ್ಧ ನಡೆಸಲಿದೆ ಎಂದು ದೆಹಲಿಯ ನಿವಾಸಿಗಳು ತಮ್ಮ ಅಸಮಾಧಾನವನ್ನು ಸ್ವಯಂಪ್ರೇರಿತರಾಗಿ, ಶಾಂತಿಯುತವಾಗಿ ಹಾಗೂ ಉತ್ತಮ ಹಾಸ್ಯಮಯ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಕ್ರಿಯಿಸಿತು.

1967ರಲ್ಲಿ ಹಲವಾರು ನೆಪಗಳನ್ನು ಮುಂದಿಟ್ಟುಕೊಂಡು ಚೀನಾ ಭಾರತದ ಮೇಲೆ ಯುದ್ಧ ಸಾರಿತು. ಆದರೆ ಈ ಬಾರಿ ಸಕಲ‌ ರೀತಿಯಲ್ಲೂ ಸಜ್ಜಾಗಿದ್ದ ಭಾರತ ಚೀನಾದ ‌ಮೇಲೆ ಪ್ರಾಬಲ್ಯ ವನ್ನು ಮೆರೆದು, 1962ರ ತಪ್ಪುಗಳು ಮತ್ತೊಮ್ಮೆ ‌ಪುನಾರವರ್ತನೆಯಾಗಲು ಬಿಡುವುದಿಲ್ಲ ಎಂದು ಚೀನಾಕ್ಕೆ ತಕ್ಕ ಪಾಠ ಕಲಿಸಿತು.

Tags: atal bihari vajpayeeBJPChinaindiaIndia-China borderkarnatakalal bahudhur shastriSheep
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram