ಯುವಜನತೆ ಎಷ್ಟು ದಿನ ತಾಳ್ಮೆಯಿಂದಿರಬೇಕು..? : ನಿರುದ್ಯೋಗದ ವಿರುದ್ಧ ವರುಣ್ ಗಾಂಧಿ ಆಕ್ರೋಶ
ನವದೆಹಲಿ : ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಭಣವಾಗ್ತಿದ್ದು, ಯುವಕರು ಕೆಲಸಕ್ಕಾಗಿ ಪರದಾಡುತ್ತಿದ್ದಾರೆ.. ಇದೀಗ ಸರ್ಕಾರಿ ಉದ್ಯೋಗದ ಅವಕಾಶಗಳು ಕಡಿಮೆಯಾಗಿವೆ. ಯುವಜನರು ಭ್ರಮನಿರಸನಗೊಂಡಿದ್ದಾರೆ. ಅವರು ಇನ್ನೂ ಎಷ್ಟು ದಿನ ತಾಳ್ಮೆಯಿಂದ ಕಾಯಬೇಕು ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಪ್ರಶ್ನಿಸಿದ್ದಾರೆ.
ಅಲ್ಲದೇ ಗ್ರಾಮೀಣ ಯುವಜನರಿಗೆ ಸರ್ಕಾರಿ ನೌಕರಿ ಸಿಗುವ ಅವಕಾಶಗಳೇ ಕುಗ್ಗಿವೆ. ಇನ್ನೊಂದೆಡೆ ಸರ್ಕಾರವೇ ರಕ್ಷಣೆ, ಪೊಲೀಸ್, ರೈಲ್ವೆ ಇಲಾಖೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ನೇಮಕಾತಿ ಮಾಡುತ್ತಿದೆ
ಮೊದಲಿಗೆ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಆಗುತ್ತಿಲ್ಲ. ಪ್ರಕ್ರಿಯೆ ನಡೆದರೂ ಪ್ರಶ್ನೆಪತ್ರಿಕೆಯೇ ಸೋರಿಕೆ ಆಗಲಿದೆ. ವರ್ಷಗಟ್ಟಲೆ ಫಲಿತಾಂಶ ಬರುವುದಿಲ್ಲ ಅಥವಾ ಹಗರಣ ನಡೆದು ಪ್ರಕ್ರಿಯೆಯೇ ರದ್ದಾಗಲಿದೆ. ರೈಲ್ವೆ ಇಲಾಖೆಯ ಡಿ ಗ್ರೂಪ್ ಹುದ್ದೆಗಾಗಿಯೇ 1.25 ಕೋಟಿ ಯುವಜನರು ಕಾಯುತ್ತಿದ್ದಾರೆ. ಸೇನೆ ನೇಮಕಾತಿಯಲ್ಲೂ ಇದೇ ಪರಿಸ್ಥಿತಿ ಇದೆ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.