ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಯಲಹಂಕ ಮೇಲ್ಸೇತುವೇಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯದಯಕ್ಕೆ ಹೋರಾಟ ಮಾಡಿದವರಿಗೆ ಅಪಮಾನ ಮಾಡಿದಂತೆ. ಅಲ್ಲದೆ ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಸ್ವಾತಂತ್ರ್ಯಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಪಡಿಸುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...








