ಕೊರೊನಾ ಹರಡುವಿಕೆ ತಡೆಗಟ್ಟಲು ದೇಶ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆ ಮನೆ ಮನೆಗೆ ತರಕಾರಿ ತಲುಪಿಸುವ ಕಾರ್ಯಕ್ಕೆ ಮುಂದಾಗಿದೆ. ದೇಶವೂ 21 ದಿನಗಳ ಕಾಲ ಲಾಕ್ ಡೌನ್ ಆಗಿರುವ ಕಾರಣಕ್ಕೆ ಜನರಲ್ಲಿ ಆತಂಕ ಮೂಡಿದೆ. ಹಾಗಾಗಿ ಅಗತ್ಯ ವಸ್ತುಗಳು ಪಡೆಯಲು ಮನೆಯಿಂದ ಹೊರ ಬರುತ್ತಿದ್ದಾರೆ. ಇದರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಹಾಗಾಗಿ ಕೊಪ್ಪಳ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ತರಕಾರಿ ನೀಡುವ ಕೆಲಸ ಮಾಡುತ್ತಿದ್ದಾರೆ. ಇಲಾಖೆ ಸಂಪರ್ಕದಲ್ಲಿರುವ ರೈತರಿಂದ ತರಕಾರಿಯನ್ನು ಖರೀದಿ ಮಾಡಿ, ಆ ತರಕಾರಿಯನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು ಮಾಡುತ್ತಿದ್ದಾರೆ. ಮೊದಲ ಹಂತವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಈ ಸೌಲಭ್ಯವನ್ನು ಜಾರಿ ಮಾಡಲಾಗಿದೆ.
ಇದು ಬರೀ ಫುಟ್ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!
ಇದು ಬರೀ ಒಂದು ಫುಟ್ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...








