ಕೊರೊನಾ ಹರಡುವಿಕೆ ತಡೆಗಟ್ಟಲು ದೇಶ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆ ಮನೆ ಮನೆಗೆ ತರಕಾರಿ ತಲುಪಿಸುವ ಕಾರ್ಯಕ್ಕೆ ಮುಂದಾಗಿದೆ. ದೇಶವೂ 21 ದಿನಗಳ ಕಾಲ ಲಾಕ್ ಡೌನ್ ಆಗಿರುವ ಕಾರಣಕ್ಕೆ ಜನರಲ್ಲಿ ಆತಂಕ ಮೂಡಿದೆ. ಹಾಗಾಗಿ ಅಗತ್ಯ ವಸ್ತುಗಳು ಪಡೆಯಲು ಮನೆಯಿಂದ ಹೊರ ಬರುತ್ತಿದ್ದಾರೆ. ಇದರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಹಾಗಾಗಿ ಕೊಪ್ಪಳ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ತರಕಾರಿ ನೀಡುವ ಕೆಲಸ ಮಾಡುತ್ತಿದ್ದಾರೆ. ಇಲಾಖೆ ಸಂಪರ್ಕದಲ್ಲಿರುವ ರೈತರಿಂದ ತರಕಾರಿಯನ್ನು ಖರೀದಿ ಮಾಡಿ, ಆ ತರಕಾರಿಯನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು ಮಾಡುತ್ತಿದ್ದಾರೆ. ಮೊದಲ ಹಂತವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಈ ಸೌಲಭ್ಯವನ್ನು ಜಾರಿ ಮಾಡಲಾಗಿದೆ.
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...








