ಹೊಸಪೇಟೆ : ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸಾವು
ಹೊಸಪೇಟೆ : ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಸಪೇಟೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಳ್ಳಿಯ ಇಮಡಾಪುರದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.
40 ವರ್ಷದ ಗೊಲ್ಲರಹಟ್ಟಿಯ ಅಮರದೇವರಗುಡ್ಡದ ದೊಡ್ಡ ಚಿತ್ತಪ್ಪ ಮೃತ ದುರ್ದೈವಿಯಾಗಿದ್ದಾರೆ.
ಬೈಕ್ ವಾಹನ ಡಿಕ್ಕಿ ಹೊಡೆಯುತ್ತಿದ್ದಂತೆ ಸ್ಥಳೀಯರು ಗಾಯಾಳಾಗಿದ್ದ ದೊಡ್ಡಚಿತ್ತಪ್ಪ ಅವರನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ದೊಡ್ಡಚಿತ್ತಪ್ಪ ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಕಾನಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.