ವಿಜಯಪುರ: ಬಬಲೇಶ್ವರ ತಾಲೂಕಿ ಹೊಳೆಬಬಲಾದಿಯ ಚಂದ್ರಗಿರಿ ಸದಾಶಿವ ಮುತ್ಯಾನ ಜಾತ್ರೆಯಲ್ಲಿ ಶ್ರೀಮಠದ ಮಠಾಧೀಶರಾದ ಸಿದ್ರಾಮಯ್ಯ ಕಾಲಜ್ಞಾನದ ಭವಿಷ್ಯ ನುಡಿದಿದ್ದಾರೆ.
2024 ರಲ್ಲಿ ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ, ಉತ್ತಮ ವ್ಯಕ್ತಿಯ ಗೆಲುವೂ ಆಕೈತಿ. ಗಡಿ ಕಾಯುವ ಯೋಧರಿಗೆ ನೋವು ಉಂಟಾಕೈತಿ, ಧರ್ಮ ಧರ್ಮಗಳ ಮಧ್ಯೆ ಕಿತ್ತಾಟ ಐತಿ ಎಂದು ಭವಿಷ್ಯ ಹೇಳಿದ್ದಾರೆ.
ರಾಜಕೀಯ ಗೊಂದಲ ಇದೆ. ಕಾಲು ಎಳೆಯುವ ಜನರು ಹೆಚ್ಚಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ರಾಜಕೀಯ ಸಂಘರ್ಷ ಹೆಚ್ಚಾಗಲಿದೆ. ಈ ಬಾರಿಯೂ ಸಾಧಾರಣ ಮಳೆ ಇದೆ. ಬೆಳೆಗೆ ಕೀಟಬಾಧೆ ಹೆಚ್ಚಾಗುತ್ತದೆ. ರೋಗಬಾಧೆ ಹೆಚ್ಚು, ಕಣ್ಣಿನ ಕಾಯಿಲೆ ಕಾಡುತ್ತದೆ. ಬರವೂ ಇದೆ, ಕೇಡೂ ಇದೆ. ಭಯೋತ್ಪಾದನೆ, ನೈಸಗಿರ್ಕ ವಿಕೋಪವೂ ಇರಲಿದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಸದಾಶಿವ ಮುತ್ಯಾನ ಮಠದಲ್ಲಿ ಇಲ್ಲಿಯವರೆಗೆ ನುಡಿದ ಭವಿಷ್ಯ ಸುಳ್ಳಾಗಿಲ್ಲ ಎಂಬುವುದು ಜನರ ನಂಬಿಕೆ.