ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸುಧಾರಿತ ಮತ್ತು ಸುರಕ್ಷತೆಯೊಂದಿಗೆ ಪರಿಷ್ಕೃತ ರೂಪದಲ್ಲಿ ವಿದ್ಯಾಗಮ: ಸುರೇಶ್ ಕುಮಾರ್

Kariyappa N by Kariyappa N
December 15, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

vidyagama anger
ಕಳೆದ ಆಗಸ್ಟ್ 8ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ ತೆರಳುವುದು, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮವನ್ನು ಉಚ್ಚನ್ಯಾಯಾಲಯದ ಅಪೇಕ್ಷೆಯನುಸಾರ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದ್ದು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮವು ನಡೆಯಲು ಅನುವು ಮಾಡಿಕೊಡಲಾಗಿದೆ. ಪ್ರಸ್ತುತ ಇರುವ ಆನ್‍ಲೈನ್, ಚಂದನ ವಾಹಿನಿಯ ಪಾಠಗಳು ಎಂದಿನಂತೆ ಮುಂದುವರೆಯಲಿವೆ. ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬಹುದಾಗಿದೆ. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್-19ರ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ. ಸ್ಯಾನಿಟೈಸರ್, ಸೋಪ್ ಇತರೆ ನೈರ್ಮಲೀಕರಣ ವ್ಯವಸ್ಥೆ ಮಾಡಿಕೊಳ್ಳುವುದು ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮಕ್ಕಳನ್ನು ಲಭ್ಯ ಶಿಕ್ಷಕರ ಸಂಖ್ಯೆ, ಲಭ್ಯ ಕೊಠಡಿಗಳ ಅನುಸಾರವಾಗಿ 15-20 ವಿದ್ಯಾರ್ಥಿಗಳ ತಂಡ ರಚಿಸುವುದು. ಆಯಾ ಸ್ತರದ  ಸ್ಥಳೀಯ ಸಂಸ್ಥೆಗಳು ಸ್ಯಾನಿಟೈಸೇಷನ್ ಜವಾಬ್ದಾರಿ ತೆಗೆದುಕೊಳ್ಳಲಿದ್ದು, ಮಕ್ಕಳು ಕುಡಿಯಲು ನೀರನ್ನು ತಮ್ಮೊಂದಿಗೆ ಮನೆಯಿಂದಲೇ ತರಲು ಸಲಹೆ ನೀಡಬಹುದು. ಅಗತ್ಯ ಬಿದ್ದಾಗ ಸ್ಥಳೀಯ ಆರೋಗ್ಯ ಇಲಾಖೆಯ ಸಹಕಾರ ಪಡೆಯಲು ಅವಕಾಶವಿದೆ. ಇದೇ ರೀತಿಯ ಹತ್ತು ಹಲವು ಕಟ್ಟುನಿಟ್ಟಿನ  ಕ್ರಮಗಳೊಂದಿಗೆ ವಿದ್ಯಾಗಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ  ಎಂದು ಸಚಿವರು ತಿಳಿಸಿದ್ದಾರೆ.


ಕೋವಿಡ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿದ್ಯಾಗಮದ ಅನುಷ್ಠಾನಾಧಿಕಾರಿಗಳಾಗಿದ್ದಾರೆ. ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 45 ನಿಮಿಷದ 3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತದೆ. ಒಂದು ದಿನಕ್ಕೆ 7ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬರಲು ಸೂಚಿಸಲಾಗುತ್ತಿದೆ.

  • ವಿದ್ಯಾಗಮವು ಶಾಲೆಗಳ ಆರಂಭವಲ್ಲ..!
    ವಿದ್ಯಾಗಮವು ಶಾಲೆಯ ಆರಂಭವಲ್ಲ. ಒಮ್ಮೆಗೆ ಅತಿ ಕಡಿಮೆ ಸಂಖ್ಯೆಯ ಮಕ್ಕಳ ತಂಡದೊಂದಿಗೆ ಶಾಲಾವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಅನುಕೂಲಕ್ಕೆ ತಕ್ಕಂತೆ ಪಾಠಗಳು ನಡೆಯುತ್ತವೆ. ತಜ್ಞರ ಸಮಿತಿಯ ಶಿಫಾರಸಿನನ್ವಯ ವೈಜ್ಞಾನಿಕವಾಗಿ ತರಗತಿಗಳು ನಡೆಯುತ್ತಿದೆ. ಎಲ್ಲ ರೀತಿಯ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು-ಎಸ್‍ಒಪಿ ಆಧಾರದಲ್ಲಿ ಕೈಗೊಳ್ಳಲಾಗುತ್ತದೆ. ಮಕ್ಕಳು ತರಗತಿ ಪಾಠಗಳಿಗೆ ಹಾಜರಾದಂತೆ ಎಲ್ಲರೂ ಒಂದೇ ಬಾರಿಗೆ ಬರುತ್ತಿಲ್ಲ. ಆಯಾ ಪ್ರದೇಶದ ಮಾರ್ಗದರ್ಶಿ ಶಿಕ್ಷಕರು ತಮಗೆ ಸನಿಹದ ನೆರೆಹೊರೆಯ ಕೆಲವೇ ಮಕ್ಕಳನ್ನು ತಂಡದಲ್ಲಿ ಪಟ್ಟಿ ಮಾಡುತ್ತಾರೆ. ಇದು ಶಾಲಾರಂಭವಲ್ಲ ಎಂಬುದನ್ನುಪೋಷಕರು ಮನಗಾಣಬೇಕು ಎಂದು ಸಚಿವರು ಹೇಳಿದ್ದಾರೆ.
    ವಿದ್ಯಾಗಮ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಆನ್-ಲೈನ್ ಶಿಕ್ಷಣ ವಂಚಿತರಿಗೆ ಅನುಕೂಲವಾಗಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯು ಯಾವುದೇ ವಿದ್ಯಾರ್ಥಿಯ ಕಲಿಕೆಯನ್ನು ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಗಳಿಗೆ ಯಾವುದೇ ವಾತಾವರಣದಲ್ಲಿಯೂ ಶಿಕ್ಷಣವನ್ನು ನೀಡುವುದು  ಸರ್ಕಾರದ ಜವಾಬ್ದಾರಿಯಾದ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗಳಿಗೆ ಕಡ್ಡಾಯವಾಗಿ ದಾಖಲಾಗಬೇಕಿದೆ ಹಾಗೆಯೇ ಅವರ ಕಲಿಕೆ ನಿರಂತರವಾಗಿರಬೇಕಿರುವಂತೆ ನೋಡಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ಗ್ರಾಮೀಣ ಖಾಸಗಿ ಶಾಲೆಗಳ ಆಸಕ್ತಿ
ವಿದ್ಯಾಗಮ ತರಗತಿಗಳನ್ನು ಸರ್ಕಾರದ ಮಾರ್ಗದರ್ಶಿ ಸೂತ್ರದ ಪ್ರಕಾರ ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳು ವಿಶೇಷವಾಗಿ ಬಜೆಟ್ ಶಾಲೆಗಳು ತಮ್ಮ ಪರಿಸರದಲ್ಲಿ ಆರಂಭಿಸಿ ತಮ್ಮ ಶಾಲೆಯ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಬಹುದಾಗಿದೆ. ಅದು ವಿದ್ಯಾಗಮವೇ ಆಗಿರಬಹುದು ಇಲ್ಲವೇ ಅವಕಾಶವಿದ್ದಲ್ಲಿ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ವಯ ಆನ್-ಲೈನ್ ಮೂಲಕವೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಏರ್ಪಡಿಸಬಹುದಾಗಿದೆ. ಯಾವುದೇ ಶಾಲೆಗಳು ಲಭ್ಯವಿರುವ ಸಂಪನ್ಮೂಲಗಳಲ್ಲಿ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಿದ್ದು, ಮಕ್ಕಳ ಹಿತವನ್ನು ಕಾಪಾಡಬೇಕಿದೆ ಎಂದು ಎಂದು ಸಚಿವರು ಹೇಳಿದ್ದಾರೆ.
ಮಕ್ಕಳ ಕಲಿಕಾ ನಿರಂತರತೆಗೆ ವಿದ್ಯಾಗಮವು ಅನುಕೂಲವಾಗಿದ್ದು, ಶಿಕ್ಷಕರು ಮತ್ತು ಪೋಷಕರಕರಲ್ಲಿ ಒಳ್ಳೆಯ ಭಾವನೆ ಮೂಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ವಿದ್ಯಾಗಮ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಷ್ಕರಿಸಿ ಪುನರಾರಂಭಿಸಲು ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧತೆ  ಮಾಡಿಕೊಂಡಿದ್ದು, ಶೀಘ್ರವೇ ಪುನರಾರಂಭಿಸಲಾಗುವುದು. ಒಟ್ಟಾರೆ ಪ್ರತಿಯೊಬ್ಬರೂ ನಮ್ಮ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳ ಕಲಿಕಾ ನಿರಂತರತೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ  ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: corona safty measureskarnatakarural schoolsstart safty in revised formsuresh kumarvidyagama
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram