ಶ್ರೀ ಸಿದ್ದೇಶ್ವರ ಸ್ವಾಮಿಜಿಗಳಿಗೆ ಕಾಲು ಜಾರಿ ಗಂಭೀರ ಗಾಯ – ಪ್ರವಚನದ ವೇಳೆ ಅವಘಡ
ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರವಚನಕ್ಕೆ ಆಗಮಿಸಿದ್ದ ವೇಳೆ ಕಾಲು ಜಾರಿ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದಾರೆ.
ಬೆಳಗಾಗಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಪ್ರವಚನ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಿದ್ದೇಶ್ವರ ಸ್ವಾಮೀಜಿಗಳು ಶೌಚಾಲಯಕ್ಕೆ ತೆರಳಿದ್ದಾಗ ಕಾಲುಜಾರಿ ಬಿದ್ದು ಗಾಯಗೊಂಡಿದ್ದಾರೆ. ಶ್ರೀಗಳಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ನಿಡಲಾಗುತ್ತಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿರುವ ಕನ್ನೇರಿಮಠದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆ ನಿಡಲಾಗುತ್ತಿದೆ. ಗಂಭೀರ ಪ್ರಮಾಣದ ಗಾಯಗಳಾಗಿರುವ ಕಾರಣ ಪ್ರವಚನ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.