vijayashanthi
‘ಕೈ’ ಗೆ ಕೈಕೊಟ್ಟು ಕಮಲ ಹಿಡಿಯಲಿರುವ ನಟಿ , ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ವಿಜಯಶಾಂತಿ..!
ನವದೆಹಲಿ: ಕಾಂಗ್ರೆಸ್ ನ ಸ್ಟಾರ್ ಪ್ರಚಾರಕಿಯಾಗಿದ್ದ ಮಾಜಿ ಸಂಸದೆ ಹಾಗೂ ನಟಿ ವಿಜಯಶಾಂತಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳು ಇಷ್ಟು ದಿನಗಳಿಂದ ಭಾರೀ ಚರ್ಚೆಯಲ್ಲಿತ್ತು. ಇದೀಗ ವಿಜಯಶಾಂತಿ ಅವರು ‘ಕೈ’ ಗೆ ಕೊಟ್ಟು ಕಮಲ ಹಿಡಿಯೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಅಲ್ಲದೇ ನಾಳೆ ದೆಹಲಿಗೆ ತೆರಳಿ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಸಾಕ್ ಎದುರಾಗಲಿದೆಯಾ ಎಂಬ ಮಾತುಗಳು ಕೇಳಿಬರುತ್ತಿವೆ.
ಸುನಾಮಿ ಬರಲಿದೆ ಹುಷಾರ್..!, ಜನರಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ ಹೇಳಿದ್ದೇನು..?
ವಿಜಯಶಾಂತಿ ಬಿಜೆಪಿಗೆ ಮತ್ತೆ ಸೇರ್ಪಡೆಯಾಗುತ್ತಿರುವುದರಿಂದ ಡಿಸೆಂಬರ್ 1 ರಂದು ನಡೆಯಲಿರುವ ಜಿಹೆಚ್ ಎಂಸಿಯ 150 ವಾರ್ಡ್ ಗಳ ಚುನಾವಣೆಯ ಪ್ರಚಾರಕ್ಕೆ ಬಲ ಬಂದಂತಾಗಿದೆ. ವಿಜಯ ಶಾಂತಿ ಬಿಜೆಪಿಗೆ ಸೇರ್ಪಡೆಯಾದರೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಉನ್ನತ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ವಿಜಯಶಾಂತಿ ಬಿಜೆಪಿ ಸೇರ್ಪೆಯಾಗುತ್ತಿದ್ದಂತೆ ಮುಂಬರುವ ಜಿಹೆಚ್ ಎಂಸಿ ಚುನಾವಣೆ ತದನಂತರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಹೈದರಾಬಾದ್ ಗೆ ಗುಡ್ ಬೈ ಹೇಳಿದ ಕಿಚ್ಚ : ‘ಶೂಟಿಂಗ್ ಅನುಭವ’ ಬಿಚ್ಚಿಟ್ಟ ನಟ
vijayashanthi
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel