ಏ. 15ಕ್ಕೆ ಕಿಚ್ಚ ಸುದೀಪ್ ಫ್ಯಾನ್ಸ್ ಗೆ ಭರ್ಜರಿ ಗುಡ್ ನ್ಯೂಸ್..!
ಸ್ಯಾಂಡಲ್ ವುಡ್ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಚಿತ್ರಕ್ಕಾಗಿ ಕಾಯುತ್ತಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಏಪ್ರಿಲ್ 15 ರಂದು ಒಂದು ಬಿಗ್ ಸರ್ಪ್ರೈಸ್ ಸಿಗಲಿದೆ. ಈ ಬಗ್ಗೆ ಖುದ್ದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದು, ವಿಕ್ರಾಂತ್ ರೋಣ ಕಡೆಯಿಂದ ಸರ್ಪ್ರೈಸ್ ಸಿಗುತ್ತಿದೆ. ಏಪ್ರಿಲ್ 15ರವರೆಗೆ ಕಾಯಿರಿ ಎಂದು ತಿಳಿಸಿದ್ದಾರೆ
ಏಪ್ರಿಲ್ 15ರಂದು ಬೆಳಗ್ಗೆ 11:10ಕ್ಕೆ ಸರ್ಪ್ರೈಸ್ ಕಾದಿದೆ ಎಂದು ಟ್ವೀಟ್ ಮಾಡಿದ್ದಾರೆ. ಏನು ಆ ಸರ್ಪ್ರೈಸ್ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಕಾಡುತ್ತಿದೆ. ವಿಕ್ರಾಂತ್ ರೋಣ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್ ರೋಣ ಆಗಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ.
ಅಜನೀಶ್ ಲೋಕನಾಥ್ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ನಿರೂಪ್ ಭಂಡಾರಿ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.