ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ, ತಿಹಾರ್ ಸೆಂಟ್ರಲ್ ಜೈಲಿನಲ್ಲಿರುವ ತನ್ನ ಜೈಲಿನ ಗೋಡೆಗೆ ತಲೆ ಬಡಿದ ನಂತರ, ಈ ಬಾರಿ ಸ್ಟೇಪ್ಲರ್ ಪಿನ್ ನುಂಗಲು ಪ್ರಯತ್ನಿಸಿದ್ದಾನೆ. ಆದರೆ ಜೈಲಿನ ಅಧಿಕಾರಿಗಳು ಅವನ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರಿಂದ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ಆತನಿಗೆ ಸಾಧ್ಯವಾಗಲಿಲ್ಲ.
ವಿನಯ್ ಹಾಗೆ ಮಾಡುವುದನ್ನು ತಡೆದ ಅಧಿಕಾರಿಗಳು ಕೂಡಲೇ ಅವನನ್ನು ಜೈಲಿನ ಆಸ್ಪತ್ರೆಗೆ ಕರೆದೊಯ್ದರು.
ಕೆಲವು ದಿನಗಳ ಹಿಂದೆ, ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿರುವ ಸೆಲ್ ಗೋಡೆಗೆ ತಲೆ ಬಡಿದು ತನ್ನನ್ನು ತಾನೇ ಗಾಯ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಆತನಿಗಾಗಿದ್ದ ಸಣ್ಣಪುಟ್ಟ ಗಾಯಗಳಿಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇದಕ್ಕೂ ಮುನ್ನ ಶನಿವಾರ, ತಾನು ಮಾನಸಿಕ ಅಸ್ವಸ್ಥನಾಗಿದ್ದು, ಚಿಕಿತ್ಸೆಗೆ ಸಮಯ ಕೋರಿ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿತ್ತು.
ಹೆಚ್ಚುವರಿ ಅಧಿವೇಶನ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಮಾನಸಿಕ ಅಸ್ವಸ್ಥತೆಯ ಯಾವ ಲಕ್ಷಣಗಳು ಕಾಣುತ್ತಿಲ್ಲ ಎಂದು ವಿನಯ್ ಕುಮಾರ್ ಶರ್ಮಾ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ್ದರು. ಮರಣದಂಡನೆ ಶಿಕ್ಷೆಯ ಸಂದರ್ಭದಲ್ಲಿ ಸಾಮಾನ್ಯ ಆತಂಕ ಮತ್ತು ಖಿನ್ನತೆ ಸಾಮಾನ್ಯ ಎಂದ ನ್ಯಾಯಾಲಯ ನಿಯಮಗಳ ಪ್ರಕಾರ ಅಪರಾಧಿಗಳ ಸಮರ್ಪಕ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಜೈಲು ಅಧೀಕ್ಷಕರಿಗೆ ಮತ್ತೊಮ್ಮೆ ನಿರ್ದೇಶಿಸಲಾಗಿದೆ ಎಂದು ಹೇಳಿತ್ತು.
ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ
ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...








