ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
ಚೆನ್ನೈ: ಇತ್ತೀಚೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದ ನಡುವೆಯೂ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿ ಸುದ್ದಿಯಾಗಿದ್ದರು. ಅವರ ಈ ವಿಡಿಯೋ ವೈರಸಲ್ ಆಗಿತ್ತು.. ನೆಟ್ಟಿಗರಿಂದ ಅವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.. ಅಲ್ಲದೇ ಸಿಎಂ ಸ್ಟಾಲಿನ್ ಅವರು ಮಹಿಳಾ ಪೊಲೀಸ್ ಇನ್ ಸ್ಪೆಕ್ಟರ್ ಅನ್ನ ಅಭಿನಂದಿಸಿದ್ದರು.. ಹೀಗೆ ಆ ಯುವಕನ ರಕ್ಷಿಸಿದ ಒಂದು ದಿನದ ನಂತರದಲ್ಲಿ ಯುವಕ ಸಾವನ್ನಪಿರೋದಾಗಿ ವರದಿಯಾಗಿದೆ.
#WATCH | Chennai, Tamil Nadu: TP Chatram Police Station's Inspector Rajeshwari carries an unconscious man, on her shoulders, to an autorickshaw in a bid to rush him to a nearby hospital.
Chennai is facing waterlogging due to incessant rainfall here.
(Video Source: Police staff) pic.twitter.com/zrMInTqH9f
— ANI (@ANI) November 11, 2021
ಉದಯ ಕುಮಾರ್(25) ಮೃತನಾಗಿದ್ದಾನೆ. ಈತ ಇಂದು ಬೆಳಿಗ್ಗೆ ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ. ಗುರುವಾರ ಟಿ.ಪಿ.ಛಾತಿರಾಮ್ನ ಇನ್ಸ್ಪೆಕ್ಟರ್ ರಾಜೇಶ್ವರಿ ಅವರು ಉದಯನನ್ನು ರಕ್ಷಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪಿದ್ದಾನೆ.
ಭಾರೀ ಮಳೆಯಲ್ಲಿ ನೆನೆದು ಯುವಕ ಪ್ರಜ್ಞಾಹೀನನಾಗಿದ್ದನು. ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡಿದ್ದ ಆಟೋರಿಕ್ಷಾ ಬಳಿಗೆ ತಲುಪಬೇಕಾದರೆ ಮಹಿಳಾ ಪೊಲೀಸ್ ಅಧಿಕಾರಿ ಪ್ರಜ್ಞಾಹೀನ ವ್ಯಕ್ತಿಯನ್ನು ತನ್ನ ಹೆಗಲ ಮೇಲೆ ಹೊತ್ತು ಕೊಂಡು ಹೋಗಿದ್ದಾರೆ. ರಾಜೇಶ್ವರಿ ಅವರು ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ಕೊಂಡು ಹೋಗುತ್ತಿದ್ದು, ಆಟೋದಲ್ಲಿ ಇಬ್ಬರನ್ನು ಕೂರಿಸಿ ಈ ವ್ಯಕ್ತಿಯನ್ನು ಬದುಕಿಸಿ, ಬೇಗ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಹೇಳುತ್ತಿದ್ದ ವೀಡಿಯೋ ವೈರಲ್ ಆಗಿದೆ.
I gave first aid after which I carried him. An auto came there, we sent him to hospital. I visited the hospital, his mother was there. I assured them to not worry&that Police dept will support them. Doctor said that treatment is on & there's nothing to worry: Inspector Rajeshwari pic.twitter.com/0SsTuWeMCG
— ANI (@ANI) November 11, 2021