ಕೊರೊನಾ ಸಂಕಷ್ಟ : ಕೋಟಿ ಕೋಟಿ ಹಣ ಸಂಗ್ರಹಿಸಿದ ವಿರುಷ್ಕಾ ದಂಪತಿ..!
ಮುಂಬೈ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಇದೇ ರೀತಿ ಕೋವಿಡ್ ಸಂಕಷ್ಟಲ್ಲಿರುವವರ ನೆರವಿಗಾಗಿ ನಟಿ ಅನುಷ್ಕಾ ಹಾಗೂ ಟೀಂ ಇಂಡಿಯಾ ವಿರಾಟ್ ದಂಪತಿ ಇತ್ತೀಚೆಗೆ ಅಭಿಯಾನವೊಂದನ್ನ ಶುರು ಮಾಡಿದ್ದರು.. ಇದಕ್ಕೆ ಈಗ ಕೋಟಿ ಕೋಟಿ ರೂಪಾಯಿ ದೇಣಿಗೆ ಸಿಕ್ಕೆ. ಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರುಗಳು ಕೋವಿಡ್ ಸಂಕಷ್ಟದಲ್ಲಿ ನೆರವಾಗಲು ನಿಧಿ ಸಂಗ್ರಹ ಅಭಿಯಾನಕ್ಕೆ ಕೆಲವು ದಿನಗಳ ಹಿಂದೆ ಚಾಲನೆ ನೀಡಿದ್ದರು.
ಸಂಗ್ರಹವಾಗುವ ಹಣದಿಂದ ದೇಶದಾದ್ಯಂತ ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ವಿತರಿಸುವ ಗುರಿಯನ್ನು ಈ ದಂಪತಿ ಹೊಂದಿದ್ದರು. ವಿರಾಟ್ ಹಾಗೂ ಅನುಷ್ಕಾ ಪ್ರಾರಂಭಿಸಿದ ಅಭಿಯಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಬಂದಿದ್ದು ಕೆಲವೇ ದಿನಗಳಲ್ಲಿ ಕೋಟ್ಯಂತರ ರೂಪಾ ಹಣವನ್ನ ಸಂಗ್ರಹಿಸಿದ್ದಾರೆ.
ಮೇ 7 ರಂದು ಅಭಿಯಾನಕ್ಕೆ ಚಾಲನೆ ನೀಡಿದ್ದ ವಿರಾಟ್-ಅನುಷ್ಕಾ ಕೇವಲ 6 ದಿನಗಳಲ್ಲಿ 11 ಕೋಟಿ ಹಣ ಗಳಿಸಿದ್ದಾರೆ. ಎಂಪಿಎಲ್ ಸಂಸ್ಥೆಯು 5 ಕೋಟಿ ಹಣವನ್ನು ಈ ಮೋದಲೇ ದೇಣಿಗೆ ನೀಡಿತು. ಇದರಿಂದಾಗಿ ಸಂಗ್ರಹವಾದ ಮೊತ್ತ ಸುಮಾರು 9 ಕೋಟಿ ಆಗಿದೆ. ಇದೀಗ ಗುರಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವ ವಿರಾಟ್-ಅನುಷ್ಕಾ 11 ಕೋಟಿ ಸಂಗ್ರಹಿಸುವ ಗುರಿ ಹಾಕಿಕೊಂಡಿದ್ದಾರೆ.
ಸಂಗ್ರಹವಾಗುವ ಹಣದಿಂದ ಆಕ್ಸಿಜನ್ ಕಾನ್ಸಂಟ್ರೇಟರ್ಗಳು, ಆಮ್ಲಜನಕ ಸಿಲಿಂಡರ್ಗಳು ಇತರೆ ಕೋವಿಡ್ ಸಂಬಂಧಿ ಪರಿಕರಗಳು ಸೇವೆಗಳಿಗೆ ಬಳಸಿಕೊಳ್ಳಲಾಗುತ್ತದೆ. ಅನುಷ್ಕಾ ಹಾಗೂ ವಿರಾಟ್ ಇಬ್ಬರೂ ಸೇರಿ 2 ಕೋಟಿ ರು ಹಣವನ್ನು ಕೋವಿಡ್ ಸಂಕಷ್ಟಕ್ಕೆ ದೇಣಿಗೆ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.