ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಸೂರ್ಯಂಗೆ ಟಾರ್ಚ್ ಹಾಕೋಕೆ ಹೋಗಿ ಕೈಸುಟ್ಟುಕೊಂಡ ವಿರಾಟ್ – ಸ್ಲೆಡ್ಜಿಂಗ್ ಮಾಡಲು ಹೋಗಿ ಸಣ್ಣವರಾದ ಆರ್ ಸಿಬಿ ನಾಯಕ..!

Sanath Rai by Sanath Rai
October 29, 2020
in IPL 2020, Newsbeat, ಕ್ರೀಡೆ
virat kohli suryakumar yadav
Share on FacebookShare on TwitterShare on WhatsappShare on Telegram

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಸೂರ್ಯಂಗೆ ಟಾರ್ಚ್ ಹಾಕೋಕೆ ಹೋಗಿ ಕೈಸುಟ್ಟುಕೊಂಡ ವಿರಾಟ್

 ಸ್ಲೆಡ್ಜಿಂಗ್ ಮಾಡಲು ಹೋಗಿ ಸಣ್ಣವರಾದ ಆರ್ ಸಿಬಿ ನಾಯಕ..!

virat kohli suryakumar yadav saakshatvaಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಕೆಲವು ಹಿರಿಯ ಕ್ರಿಕೆಟಿಗರು ಟೀಕೆ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ಟೀಮ್ ಇಂಡಿಯಾದಲ್ಲಿ ತನ್ನ ಆಪ್ತರಿಗೆ ಅವಕಾಶ ನೀಡುತ್ತಿದ್ದಾರೆ ಅನ್ನೋ ಆರೋಪವೂ ಕೇಳಿಬರುತ್ತಿದೆ.
ಮುಖ್ಯವಾಗಿ ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈಬಿಟ್ಟಿರುವ ಬಗ್ಗೆ ಸಾಕಷ್ಟು ಟೀಕೆಗಳು ಬರುತ್ತಿವೆ.
ವಿರಾಟ್ ಮತ್ತು ರೋಹಿತ್ ಸಂಬಂಧ ಅಷ್ಟಕ್ಕಷ್ಟೇ. ಹೀಗಾಗಿ ಗಾಯದ ನೆಪವೊಡ್ಡಿ ರೋಹಿತ್ ಅವರನ್ನು ತಂಡದಿಂದ ಕೈಬಿಡಲಾಗಿದೆ ಅಂತ ಹೇಳಲಾಗುತ್ತಿದೆ.

ಈ ನಡುವೆ ವಿರಾಟ್ ಕೊಹ್ಲಿ ಮೈದಾನದಲ್ಲಿ ಸ್ಲೆಡ್ಜಿಂಗ್ ಮಾಡಲು ಯತ್ನಿಸಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ.
ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಎದುರಾಳಿ ಬ್ಯಾಟ್ಸ್ ಮೆನ್ ನನ್ನು ಅಣಕಿಸುವ ಪ್ರಯತ್ನ ಮಾಡಿರುವುದು ಗೊತ್ತಾಗುತ್ತಿದೆ.
ಮುಂಬೈ ಇಂಡಿಯನ್ಸ್ ತಂಡದ ಬ್ಯಾಟ್ಸ್ ಮೆನ್ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನಡೆಸಿ ತಂಡಕ್ಕೆ ಗೆಲುವನ್ನು ತಂದುಕೊಟ್ಟಿದ್ದರು.
ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಸೂರ್ಯಕುಮಾರ್ ಯಾದವ್ ಅವರ ತಾಳ್ಮೆಯನ್ನು ಪರೀಕ್ಷೆ ಮಾಡಲು ವಿರಾಟ್ ಕೊಹ್ಲಿ ಮುಂದಾಗಿದ್ದಾರೆ.
suryakumar yadav virat kohliತನ್ನ ಪವರ್ ಫುಲ್ ಆಟದ ಮೂಲಕ ಆರ್ ಸಿಬಿಗೆ ಸೂರ್ಯಕುಮಾರ್ ಯಾದವ್ ಕಂಟಕವಾಗಿ ಪರಿಣಮಿಸುತ್ತಿದ್ದರು.
ಡೇಲ್ ಸ್ಟೇನ್ ಎಸೆತದಲ್ಲಿ ಸೂರ್ಯಕುಮಾರ್ ಬಾರಿಸಿದ ಚೆಂಡನ್ನು ವಿರಾಟ್ ಕೊಹ್ಲಿ ಕೈಯಲ್ಲಿ ಹಿಡಿದುಕೊಂಡು ಸೂರ್ಯಕುಮಾರ್ ಯಾದವ್ ಅವರ ಸನೀಹಕ್ಕೆ ಬಂದು ಮಾತನಾಡುತ್ತಿದ್ದರು.
ಆಗ ಸೂರ್ಯಕುಮಾರ್ ಯಾದವ್ ಕೂಡ ಸುಮ್ಮನೆ ಕೂರಲಿಲ್ಲ. ವಿರಾಟ್ ಕೊಹ್ಲಿಯವರನ್ನು ದಿಟ್ಟಿಸಿಕೊಂಡು ನೋಡುತ್ತಿದ್ದರು. ವಿರಾಟ್ ಮನಸಲ್ಲೇ ಮಾತನಾಡಿಕೊಂಡು ಏನೇನೋ ಹೇಳುತ್ತಿದ್ದರು. ಆದ್ರೆ ಸೂರ್ಯ ಕುಮಾರ್ ಯಾದವ್ ಸುಮ್ಮನೆ ಕೇಳಿಸಿಕೊಂಡು ತಮ್ಮ ಪಾಡಿಗೆ ತಾವು ನಿಂತಿದ್ದರು. ವಿರಾಟ್ ಕೊಹ್ಲಿ ಪಕ್ಕದಲ್ಲಿ ಬಂದು ಮಾತನಾಡುತ್ತಿದ್ರೂ ಏನು ಹೇಳದೇ ನಾನ್ ಸ್ಟ್ರೈಕರ್ ನತ್ತ ಹೆಜ್ಜೆ ಹಾಕಿದ್ದರು.
ಆದ್ರೆ ವಿರಾಟ್ ಕೊಹ್ಲಿಯ ವರ್ತನೆ ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಕೂಡ ಕಾಡುತ್ತಿದೆ. ಈ ಹಿಂದೆ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಜೊತೆಗೂ ಗಲಾಟೆ ಮಾಡಿಕೊಂಡಿದ್ದರು. ಐಪಿಎಲ್ ಸೇರಿದಂತೆ ಇನ್ನಿತರ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೊಹ್ಲಿ ಸೈಲೆಂಟಾಗಿ ಸ್ಲೆಡ್ಜಿಂಗ್ ಮಾಡುತ್ತಿರುವುದು ಗೊತ್ತಿಲ್ಲದ ವಿಚಾರವೇನೂ ಅಲ್ಲ.
ಆದ್ರೆ ಐಪಿಎಲ್ ನಲ್ಲಿ ತಮ್ಮವರ ಜೊತೆಗೆ ಅದು ಕೂಡ ಯುವ ಬ್ಯಾಟ್ಸ್ ಮೆನ್ ಗಳ ಜೊತೆ ಸ್ಲೆಡ್ಜಿಂಗ್ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ?
suryakumar yadav mumbai indians saakshatv ಇನ್ನು ಸೂರ್ಯಕುಮಾರ್ ಯಾದವ್ ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಕ್ಕಿಲ್ಲ. ಈ ಬೇಸರ ನೋವು ಅವರಲ್ಲೂ ಇದೆ. ಹೀಗಾಗಿಯೇ ರೊಚ್ಚಿಗೆದ್ದು ಆಟವಾಡುತ್ತಿದ್ದಾರೆ.
ಅದು ಅಲ್ಲದೆ ಪಂದ್ಯ ಮುಗಿದ ಬಳಿಕ ಸೂರ್ಯಕುಮಾರ್ ಯಾದವ್ ನಾನು ಇದ್ದೇನೆ.. ಕೂಲ್ ಆಗಿರಿ.. ಅಂತ ಪೆವಿಲಿಯನ್‍ನತ್ತ ಸನ್ನೆ ಮಾಡಿ ತೋರಿಸುತ್ತಿದ್ದಾರೆ.
ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಮಾಡಿರುವ ಸ್ಲೆಡ್ಜಿಂಗ್‍ಗೆ ಸೂರ್ಯಕುಮಾರ್ ಯಾದವ್ ಕೂಡ ಸರಿಯಾದ ಉತ್ತರವನ್ನೇ ನೀಡಿದ್ದಾರೆ.
ಆದ್ರೆ ಇಲ್ಲಿ ಸಣ್ಣವರಾಗಿದ್ದು ವಿರಾಟ್ ಕೊಹ್ಲಿ. ಯುವ ಆಟಗಾರನ ಆಟವನ್ನು ಮೆಚ್ಚಿಕೊಳ್ಳುವುದರ ಬದಲು ಅವರನ್ನು ಸ್ಲೆಡ್ಜಿಂಗ್ ಮೂಲಕ ಕುಗ್ಗುವಂತೆ ಮಾಡುವುದು ಸರಿಯಲ್ಲ. ಒಂದು ವೇಳೆ ಸೂರ್ಯಕುಮಾರ್ ಯಾದವ್ ಕೂಡ ಮಾತಿಗೆ ಮಾತು ಬೆಳೆಸುತ್ತಿದ್ರೆ ವಿರಾಟ್ ಕೊಹ್ಲಿಯ ನಾಯಕತ್ವಕ್ಕೆ ಮತ್ತು ಇಮೇಜ್‍ಗೆ ದಕ್ಕೆಯಾಗುತ್ತಿತ್ತು.
ನಾಯಕನಾದವನು ಎಷ್ಟೇ ಆಕ್ರಮಣಕಾರಿ ಪ್ರವೃತ್ತಿಯಾಗಿದ್ರೂ ಕೂಡ ಅದನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು. ವಿರಾಟ್ ಕೊಹ್ಲಿ ಅದ್ಭುತವಾಗಿ ಆಡುತ್ತಾರೆ. ರನ್ ಮೇಷಿನ್, ದಾಖಲೆ ವೀರ ಹೀಗೆ ನಾನಾ ರೀತಿಯ ಗೌರವಗಳು ಇವೆ. ಆದ್ರೆ ವಿರಾಟ್ ತನ್ನತನವನ್ನು ಉಳಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಬಹುಶಃ ವಿರಾಟ್ ಅದನ್ನು ಮೆರೆತಿದ್ದಾರೆ.

Tags: #saakshatvIPL 2020mumbai indiansRCBRCB skipper virat tries sledgingSuryakumar Yadavvirat kohli
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram