ಸಿರಾಜ್ ಈ ಯಶಸ್ಸಿಗೆ ವಿರಾಟ್, ಆರ್ಸಿಬಿ ಕಾರಣ
ಹೈದರಾಬಾದ್ : ಮೊಹಮ್ಮದ್ ಸಿರಾಜ್ ಸದ್ಯ ಟಾಕ್ ಆಫ್ ದಿ ಟೌನ್.. ಟೀಂ ಇಂಡಿಯಾದ ರೈಸಿಂಗ್ ಸ್ಟಾರ್.. ಕ್ರಿಕೆಟ್ ಸೂಪರ್ ಸ್ಟಾರ್ ಗಳ ಮನಗೆದ್ದ ಯಂಗ್ ಪವರ್ ಸ್ಟಾರ್.
ಮೊಹಮ್ಮದ್ ಸಿರಾಜ್ ಈ ಪ್ರದರ್ಶನಕ್ಕಾಗಿ ನಾನು ವಿರಾಟ್ ಬಾಯ್ ಹಾಗೂ ಆರ್ಸಿಬಿಗೆ ಶ್ರೇಯಸ್ಸು ಸಲ್ಲಿಸಲು ಬಯಸುತ್ತೇನೆ’. ಉತ್ತಮ ಪ್ರದರ್ಶನ ನೀಡದಿದ್ದಾಗಲೂ ವಿರಾಟ್ ಬಾಯ್ ಬೆಂಬಲಿಸಿದ್ದಾರೆ.
ಆರ್ಸಿಬಿ ಕೂಡಾ ಅವರನ್ನು ಉಳಿಸಿಕೊಂಡು ನಂಬಿಕೆ ವ್ಯಕ್ತಪಡಿಸಿತು. ಸಿರಾಜ್ ರ ಈ ಯಶಸ್ಸು ವಿರಾಕ್ ಕೊಹ್ಲಿ ಅವರಿಗೆ ಸಲ್ಲಬೇಕು ಅಂತ ಸಿರಾಜ್ ಸಹೋದರ ಮೊಹಮ್ಮದ್ ಇಸ್ಮಾಯಿಲ್ ಅಭಿಪ್ರಾಯಪಟ್ಟಿದ್ದಾರೆ.
ಆಸೀಸ್ ನೆಲದಲ್ಲಿ ಪ್ರಮುಖ ವೇಗಿಗಳ ಅನುಪಸ್ಥಿತಿಯಲ್ಲೂ ಭಾರತದ ಬೌಲಿಂಗ್ ಪಡೆಯನ್ನು ಮುನ್ನಡೆಸಿದ್ದ ಮೊಹಮ್ಮದ್ ಸಿರಾಜ್, ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನಲ್ಲಿ ಅತಿ ಮುಖ್ಯ ಪಾತ್ರವಹಿಸಿದ್ದರು.
ಅದರಲ್ಲೂ ಗಾಬ್ಬಾ ಅಂಗಳದಲ್ಲಿ ಹೈದರಾಬಾದ್ ಎಕ್ಸ್ ಪ್ರೆಸ್ ಗೆ ಕಾಂಗರೂಗಳು ಕಂಗಾಲಾಗಿ ದಿಕ್ಕಾಪಾಲಾಗಿದ್ದರು. ಪರಿಣಾಮ ಗಾಬಾ ಭದ್ರಕೋಟೆಯಲ್ಲಿ 33 ವರ್ಷಗಳಲ್ಲಿ ಆಸ್ಟ್ರೇಲಿಯಾ ಮೊದಲ ಬಾರಿಗೆ ಸೋಲನುಭವಿಸಿದೆ. ಸಿರಾಜ್ ಅವರ ಈ ಅತ್ಯದ್ಭುತ ಪ್ರದರ್ಶನಕ್ಕೆ ಇಡೀ ಕ್ರಿಕೆಟ್ ದುನಿಯಾ ಸಲಾಂ ಎನ್ನುತ್ತಿದೆ.
ಅಂದಹಾಗೆ ಸಿರಾಜ್ ಆಸ್ಟ್ರೇಲಿಯಾ ನೆಲದಲ್ಲಿ ಕಾಲಿಟ್ಟಾಗ ಅವರಿಗೆ ತಂದೆ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಡಿದಿತ್ತು. ಆದರೂ ಟೀಮ್ ಇಂಡಿಯಾ ಪರ ಆಡಲು ಉತ್ಸುಕತೆ ತೋರಿದ ಸಿರಾಜ್ಗೆ ಜನಾಂಗೀಯ ನಿಂದನೆಯಂತಹ ಕೆಟ್ಟ ಅನುಭವ ಎದುರಾಗಿತ್ತು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಆದರೂ ಮೆಲ್ಬರ್ನ್ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಸಿರಾಜ್, ಬ್ರಿಸ್ಬೇರ್ನ್ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಚೊಚ್ಚಲ ಐದು ವಿಕೆಟ್ ಸಾಧನೆ ಮಾಡಿದ್ದರು.
ಇನ್ನು ಸಿರಾಜ್ ಗೆ ತಂದೆ ಸಾವಿನ ನೋವನ್ನು ನಿವಾರಿಸುವಲ್ಲಿ ಅವರ ತಾಯಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಸಿರಾಜ್ ಅವರೊಂದಿಗೆ ಪ್ರತಿದಿನ ಎರಡು-ಮೂರು ತಾಸುಗಳ ಕಾಲ ಮಾತನಾಡಿ ಹುರಿದುಂಬಿಸುತ್ತಿದ್ದರು. ನೀನು ನಿನ್ನ ತಂದೆಯ ಕನಸಿಗಾಗಿ ಆಡುತ್ತಿದ್ದೀಯ.
ದೇಶಕ್ಕಾಗಿ ನೀನು ಕ್ರಿಕೆಟ್ ಆಡುವುದನ್ನು ನೋಡುವುದು ನಿನ್ನ ತಂದೆಯ ಬಹುದೊಡ್ಡ ಕನಸಾಗಿತ್ತು. ಅವರ ಕನಸನ್ನ ನೀನು ನನಸು ಮಾಡಬೇಕು ಅಂತಾ ಸಿರಾಜ್ ಗೆ ಅವರ ತಾಯಿ ಹುರಿಬುಂಬಿಸುತ್ತಿದ್ದರು.
ಇನ್ನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮಾರ್ನಸ್ ಅವರ ವಿಕೆಟ್ ಅನ್ನು ಕಬಳಿಸಿದ್ರು. ಚೊಚ್ಚಲ ಟೆಸ್ಟ್ ಪಂದ್ಯದ ಚೊಚ್ಚಲ ವಿಕೆಟ್ ಪಡೆದ ಸಿರಾಜ್ ಆಗಸದತ್ತ ಕೈತೋರಿಸಿಕೊಂಡು ಸಂಭ್ರಮವನ್ನು ಆಚರಿಸಿಕೊಂಡ್ರು.
ಆ ನಂತರ ಕ್ಯಾಮರೂನ್ ಗ್ರೀನ್ ಅವರನ್ನು ಎಲ್ ಬಿ ಬಲೆಗೆ ಬೀಳಿಸಿದ್ರು. ಹೀಗೆ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಎರಡು ವಿಕೆಟ್ ಪಡೆದ ಸಿರಾಜ್ ತನ್ನ ಪ್ರೇರಕ ಶಕ್ತಿಯಾಗಿದ್ದ ತಂದೆಯವರನ್ನು ಸ್ಮರಿಸಿಕೊಂಡ್ರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇನ್ನು ಕೊನೆಯ ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕೊನೆಗೂ ಅಪ್ಪನ ಕನಸು ನನಸಾಗಿಸುವಲ್ಲಿ ಸಿರಾಜ್ ಯಶಸ್ವಿಯಾಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel