ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶ್ರೀಮಂತ ಇತಿಹಾಸ…. ಉತ್ತಮ ಪ್ರವಾಸಿ ತಾಣ… ಹಿಂದೂಗಳ ಶೌರ್ಯ ದೇವತೆಯಾದ ವಿಶಾಖಾ ಹೆಸರಿನಲ್ಲಿರುವ ವಿಶಾಖಪಟ್ಟಣಂ..! INTERESTING FACTS

Namratha Rao by Namratha Rao
September 11, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಶ್ರೀಮಂತ ಇತಿಹಾಸ…. ಉತ್ತಮ ಪ್ರವಾಸಿ ತಾಣ… ಹಿಂದೂಗಳ ಶೌರ್ಯ ದೇವತೆಯಾದ ವಿಶಾಖಾ ಹೆಸರಿನಲ್ಲಿರುವ ವಿಶಾಖಪಟ್ಟಣಂ..! INTERESTING FACTS

ಬಂದರು ನಗರಿ ಎಂತಲೇ ಖ್ಯಾತಿ ಪಡೆದ ವಿಶಾಖಪಟ್ಟಣಂ ಅಥವಾ ವೈಜಾಗ್ ಮಾನ್ಸೂನ್ ನಲ್ಲಿ ಭೇಟಿ ನೀಡಲೇಬೇಕಾದ ಸ್ಥಳ. ಭಾರತದ ಆಗ್ನೇಯ ಕರಾವಳಿಯಲ್ಲಿರುವ ಇದು, ಆಂಧ್ರ ಪ್ರದೇಶದ ಎರಡನೇ ದೊಡ್ಡ ನಗರವಾಗಿದೆ. ಪ್ರಾಥಮಿಕವಾಗಿ ಒಂದು ಕೈಗಾರಿಕಾ ನಗರವಾಗಿರುವ ವೈಜಾಗ್ ತನ್ನ ಸುಂದರ ತೀರ,ರಮಣೀಯ ದಿಣ್ಣೆಗಳು, ಸಮೃದ್ಧ ಹಸಿರು ಮತ್ತು ಶ್ರೀಮಂತ ಇತಿಹಾಸ ಹಾಗೂ ಸಂಸ್ಕೃತಿಗಳಿಂದಾಗಿ ಉತ್ತಮ ಪ್ರವಾಸಿ ತಾಣವಾಗಿಯೂ ಮಾರ್ಪಡುತ್ತಿರುವುದು ಸ್ವಾಗತಾರ್ಹ. ಹಿಂದೂಗಳ ಶೌರ್ಯ ದೇವತೆಯಾದ ವಿಶಾಖಾದಿಂದ ಈ ನಗರಕ್ಕೆ ವಿಶಾಖಪಟ್ಟಣಂ ಎಂಬ ಹೆಸರು ಬಂದಿದೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಈ ನಗರಕ್ಕಿದೆ ಭವ್ಯ ಇತಿಹಾಸ..!
ವಿಶಾಖಪಟ್ಟಣ ಮೊದಲು ಕಳಿಂಗ ರಾಜ್ಯದ ಭಾಗವಾಗಿತ್ತು. ನಂತರ ವೆಂಗಿ, ಪಲ್ಲವ, ಪೂರ್ವ ಗಂಗ ಸಾಮ್ರಾಜ್ಯಗಳಿಗೆ ಸೇರಿತ್ತು. ದಾಖಲೆಗಳ ಪ್ರಕಾರ ೧೧ ಮತ್ತು ೧೩ನೇ ಶತಮಾನದ ಕಾಲದಲ್ಲಿ ಚೋಳ ಹಾಗೂ ಗಜಪತಿ ಸಾಮ್ರಾಜ್ಯಗಳ ತಿಕ್ಕಾಟದ ಅವಧಿಯಲ್ಲಿ ಕಟ್ಟಲ್ಪಟ್ಟಿತು. ಅನಂತರ ೧೫ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯವು ವಶಪಡಿಸಿಕೊಂಡಿತು. ೧೬ನೇ ಶತಮಾನದಲ್ಲು ಮೊಘಲ್ ಸಾಮ್ರಾಜ್ಯಕ್ಕೆ ಸೇರಿ ಅನಂತರ ಯುರೋಪಿಯನ್ ದೇಶಗಳು ವ್ಯಾಪಾರಾಸಕ್ತಿ ಚಟುವಟಿಕೆಗಳ ನೆಲೆಯಾಯಿತು. ೧೮ನೇ ಶತಮಾನದ ಕೊನೆಯ ವೇಳೆಗೆ ಇದು ಫ್ರೆಂಚರ ಆಳ್ವಿಕೆಗೆ ಒಳಪಟ್ಟಿತು. ೧೮೦೪ರಿಂದ ೧೯೪೭ರ ಭಾರತದ ಸ್ವಾತಂತ್ರ್ಯದವರೆಗೆ ಬ್ರಿಟಿಶರ ಆಳ್ವಿಕೆಗೆ ಒಳಪಟ್ಟಿತ್ತು.

ಈ ನಗರವು ಅತಿಹಳೆಯ ಹಡಗುನೆಲೆ ಹಾಗೂ ಪೂರ್ವಕರಾವಳಿಯ ನೈಸರ್ಗಿಕ ಬಂದರನ್ನು ಹೊಂದಿದೆ. ಭಾರತೀಯ ನೌಕಾಸೇನೆಯ ಪೂರ್ವ ಕಮಾಂಡ್ ನ ಹಾಗೂ ಪೂರ್ವಕರಾವಳಿ ರೈಲ್ವೆ ವಲಯದ ಪ್ರಧಾನ ಕಛೇರಿಗಳು ಇಲ್ಲಿವೆ.

ವಿಶಾಖಪಟ್ಟಣವು ಶ್ರೀ ವೆಂಕಟೇಶ್ವರ ಕೊಂಡ, ರೋಸ್ ಹಿಲ್ ಮತ್ತು ದರ್ಗಾ ಕೊಂಡ ಎಂಬ ಬೆಟ್ಟಗಳಿಂದ ಸುತ್ತುವರೆದಿವೆ. ಇಲ್ಲಿನ ಪ್ರತಿ ಬೆಟ್ಟಗಳಲ್ಲಿಯೂ ವಿವಿಧ ಧರ್ಮಗಳ ಪುಣ್ಯಕ್ಷೇತ್ರಗಳು ನೆಲೆಸಿವೆ. ವೆಂಕಟೇಶ್ವರ ಬೆಟ್ಟದಲ್ಲಿ ಶಿವನ ದೇವಸ್ಥಾನವಿದ್ದರೆ, ರೋಸ್ ಹಿಲ್ ನಲ್ಲಿ ವರ್ಜಿನ್ ಮೇರಿ ಚರ್ಚ್ ಮತ್ತು ದರ್ಗಾ ಕೊಂಡ ಇಸ್ಲಾಮಿಕ್ ಸಂತ ಬಾಬಾ ಇಶಾಕ್ ಮದಿನಾರ ಸಮಾಧಿಯನ್ನು ಹೊಂದಿದೆ.

ರಿಷಿಕೊಂಡ ಬೀಚ್, ಗಂಗಾವರಂ ಬೀಚ್, ಭಿಮ್ಲಿ ಮತ್ತು ಯರಡ ಬೀಚ್ ಗಳು ನಗರದ ಪೂರ್ವ ಭಾಗದಲ್ಲಿನ ಕಡಲತೀರಗಳು. ಇತರ ಪ್ರವಾಸಿ ಆಕರ್ಷಣೆಗಳಲ್ಲಿ ಕೈಲಾಸಗಿರಿ ಹಿಲ್ ಪಾರ್ಕ್, ಸಿಂಹಾಚಲಂ ಬೆಟ್ಟಗಳು, ಅರಕು ಕಣಿವೆ, ಕಂಬಲಕೊಂಡ ವನ್ಯಮೃಗ ಅಭಯಾರಣ್ಯ, ಜಲಾಂತರ್ಗಾಮಿ ವಸ್ತುಸಂಗ್ರಹಾಲಯ, ವಾರ್ ಮೆಮೋರಿಯಲ್ ಮತ್ತು ನೌಕಾ ವಸ್ತುಸಂಗ್ರಹಾಲಯಗಳು ಸೇರಿವೆ.

ಇಲ್ಲಿ ಸಮುದ್ರ ತೀರಗಳನ್ನು ಇಷ್ಟಪಡುವವರು ಮಾತ್ರವಲ್ಲದೇ ರಮಣೀಯ ಕಣಿವೆ ಮತ್ತು ಗುಡ್ಡಗಳನ್ನು ನೋಡಿ ಆನಂದಿಸಲು ಸಹ ಸಹಸ್ರಾರು ಪ್ರವಾಸಿಗರು ಆಗಮಿಸುತ್ತಾರೆ. ಇನ್ನು ವಿಶಾಖಪಟ್ಟಣಂ ಸಿನಿಮಾ ಮಂದಿಗೆ ಅಚ್ಚುಮೆಚ್ಚಿನ ತಾಣ. ತೆಲುಗು, ತಮಿಳು ಸೇರಿದಂತೆ ದಕ್ಷಿಣ ಭಾರತದ ಬಹುತೇಕ ಸಿನಿಮಾಗಳು ಇಲ್ಲಿ ಚಿತ್ರೀಕರಣಗೊಂಡಿವೆ. ನಟ ಶ್ರೀಧರ್, ನಟಿ ಸರಿತಾ ಅಭಿನಯದ ಬ್ರಹ್ಮಗಂಟು ಚಿತ್ರದ ಚಿತ್ರೀಕರಣವಾಗಿದ್ದು ಇಲ್ಲಿಯೇ.

ವಿಶಾಖಪಟ್ಟಣಂ ಗೆ ರಸ್ತೆ, ರೈಲು ಮತ್ತು ವಾಯು ಮಾರ್ಗದ ಮೂಲಕ ತೆರಳಬಹುದು. ನಿಮ್ಮ ಬಜೆಟ್ ಗನುಗುಣವಾಗಿ ಇಲ್ಲಿ ತಂಗಲು ಹೊಟೇಲ್ ಮತ್ತು ರೆಸಾರ್ಟ್ ಗಳಿವೆ. ಮಾನ್ಸೂನ್ ಎಂಜಾಯ್ ಮಾಡುವವರು ವಿಶಾಖಪಟ್ಟಣಂ ಗೆ ಭೇಟಿ ನೀಡಲೇಬೇಕು. 

Tags: #saakshatvindiatourismtravellvaizagvishakhapattanam
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram