ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಒಕ್ಕಲಿಗರು ಮತ ಹಾಕೋದು ದೇವೇಗೌಡರಿಗೇ ಹೊರತು ಡಿಕೆಶಿಗಲ್ಲ: ಕೆಎನ್ ರಾಜಣ್ಣ ನೀಡಿದ ಕಹಿಸತ್ಯಕ್ಕೆ ಬೆಚ್ಚಿಬಿದ್ದ ಕಾಂಗ್ರೆಸ್!-ದೇವೇಗೌಡರೇ ಒಕ್ಕಲಿಗರ ಸುಪ್ರೀಂ ಎಂದು ಸಾರಿದ ರಾಜಣ್ಣ

Shwetha by Shwetha
September 19, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಬಾಂಬ್ ಸಿಡಿದಿದೆ. ಅದು ಕೂಡ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಗಿನಿಂದಲೇ! ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದ ಅಪ್ರತಿಮ ನಾಯಕ ಎಂದು ಬಿಂಬಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಹಿರಿಯ ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಒಕ್ಕಲಿಗರು ಮತ ಹಾಕುವಾಗ ಡಿ.ಕೆ. ಶಿವಕುಮಾರ್ ಅವರ ಮುಖ ನೋಡುವುದಿಲ್ಲ, ಬದಲಾಗಿ ಇಂದಿಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮುಖ ನೋಡಿಯೇ ಮತ ಹಾಕುತ್ತಾರೆ ಎಂದು ರಾಜಣ್ಣ ಗುಡುಗಿದ್ದಾರೆ.

ಡಿಕೆಶಿ ಸಿಎಂ ಆದರೂ ಮತ ಬರಲ್ಲ

Related posts

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

September 19, 2026
ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

September 19, 2026

ಒಕ್ಕಲಿಗ ಮತಬ್ಯಾಂಕ್ ಕುರಿತು ಸತ್ಯದರ್ಶನ ಮಾಡಿಸಿರುವ ಕೆ.ಎನ್. ರಾಜಣ್ಣ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದರಿಂದ ಎಲ್ಲ ಒಕ್ಕಲಿಗರು ಕಾಂಗ್ರೆಸ್‌ಗೆ ಮತ ಹಾಕಿಬಿಡುತ್ತಾರೆ ಎಂಬುದು ಸುಳ್ಳು. ಅಧಿಕಾರಿಗಳ ಮೂಲಕ ಬೈಪಾಸ್ ಹಾದಿಯಲ್ಲಿ ಕೇವಲ ಒಂದು ಐದು ಪರ್ಸೆಂಟ್ ಮತಗಳು ಹೆಚ್ಚುವರಿಯಾಗಿ ಬರಬಹುದು ಅಷ್ಟೆ. ಆದರೆ ಗೆಲುವಿಗೆ ಬೇಕಾದ ನೈಜ ಮತಗಳು ಇಂದಿಗೂ ದೇವೇಗೌಡರ ಪಾಲೇ ಆಗಲಿವೆ. ಇದು ಸದ್ಯದ ವಾಸ್ತವ ಸ್ಥಿತಿ ಎಂದು ರಾಜಣ್ಣ ವಿಶ್ಲೇಷಿಸಿದ್ದಾರೆ. ಇದು ಡಿ.ಕೆ. ಶಿವಕುಮಾರ್ ಅವರಿಗೆ ಸಮುದಾಯದ ಮೇಲಿರುವ ಹಿಡಿತದ ಬಗ್ಗೆ ನೇರ ಸವಾಲು ಹಾಕಿದಂತಿದೆ.

ಸಿದ್ದರಾಮಯ್ಯ ಯಾಕೆ ಹಿಂದೆ ಸರಿಯಬೇಕು?

ಇತ್ತೀಚೆಗೆ ಸಿದ್ದರಾಮಯ್ಯನವರು ನನ್ನ ಮಾತು ನಡೆಯುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಸಿದ್ದರಾಮಯ್ಯನವರು ಈಗಲೂ ಪ್ರಶ್ನಾತೀತ ನಾಯಕರು. ಅವರು ನೇಪಥ್ಯಕ್ಕೆ ಸರಿಯುವ ಅಥವಾ ಅಸಹಾಯಕರಾಗುವ ಅಗತ್ಯವಿಲ್ಲ. ರಾಜಕಾರಣದಲ್ಲಿ ಏರಿಳಿತಗಳು ಸಹಜ. ಆದರೆ ಈಗ ಎಲ್ಲವೂ ಡಿ.ಕೆ. ಶಿವಕುಮಾರ್ ಅವರೇ ನೋಡಿಕೊಳ್ಳುತ್ತಿದ್ದಾರೆ ಎಂಬ ಭಾವನೆ ಇರಬಹುದು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕುರುಬರ ವೋಟು ಪೂರ್ತಿ ಬಂದಿತ್ತಾ? ಇಲ್ಲ ತಾನೇ? ಹಾಗೆಯೇ ಡಿ.ಕೆ. ಶಿವಕುಮಾರ್ ಇದ್ದಾಗ ಒಕ್ಕಲಿಗರು ವೋಟ್ ಹಾಕ್ತಾರೆ ಅಂತ ಹೇಳೋಕೆ ಆಗಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.

ಒಕ್ಕಲಿಗ ನಾಯಕನ ಪರೀಕ್ಷೆ ಚುನಾವಣೆಯಲ್ಲಿ

ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಬಲ ಸಮುದಾಯದ ನಾಯಕ ಎಂದು ಮುಂದೆ ಮಾಡಿದ್ದೇವೆ. ಆದರೆ ಜನರು ಅವರನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬುದು ಬರುವ ಚುನಾವಣೆಯಲ್ಲಿ ಮಾತ್ರ ನಿರ್ಧಾರವಾಗಲಿದೆ. ನಾಯಕತ್ವದ ಅಸಲಿ ಪರೀಕ್ಷೆ ನಡೆಯುವುದು ಅಖಾಡದಲ್ಲಿ ಮಾತ್ರ ಎಂದು ರಾಜಣ್ಣ ಹೇಳುವ ಮೂಲಕ ಡಿಕೆಶಿಗೆ ವಾರ್ನಿಂಗ್ ನೀಡಿದ್ದಾರೆ. ಇನ್ನು ಅಹಿಂದ ಸಂಘಟನೆಯ ಬಗ್ಗೆ ಮಾತನಾಡಿದ ಅವರು, ಈ ಸಂಘಟನೆ ಇನ್ನು ಪ್ರೀ ಮೆಚ್ಯೂರ್ ಹಂತದಲ್ಲಿದೆ, ಮುಂದೆ ಜನಾದೇಶಕ್ಕೆ ತಕ್ಕಂತೆ ಹೆಜ್ಜೆ ಇಡುತ್ತೇವೆ ಎಂದಿದ್ದಾರೆ.

ಅಪೆಕ್ಸ್ ಬ್ಯಾಂಕ್ ಚುನಾವಣೆಯ ಹಿನ್ನಡೆಯಿಲ್ಲ

ತಮ್ಮ ವೈಯಕ್ತಿಕ ರಾಜಕೀಯ ಭವಿಷ್ಯದ ಬಗ್ಗೆಯೂ ಸ್ಪಷ್ಟನೆ ನೀಡಿದ ರಾಜಣ್ಣ, ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಗಿದ ಅಧ್ಯಾಯ. ಸಿದ್ದರಾಮಯ್ಯನವರು ನನಗೆ ಬೆಂಬಲ ನೀಡಲು ಪ್ರಯತ್ನಿಸಿದರು, ಆದರೆ ಅದು ಯಶಸ್ವಿಯಾಗಲಿಲ್ಲ. ಅದಕ್ಕಾಗಿ ಸಿದ್ದರಾಮಯ್ಯ ವೀಕ್ ಆಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ನನಗೆ ಯಾವುದೇ ಹಿನ್ನಡೆಯಾಗಿಲ್ಲ ಮತ್ತು ಮುಂದೆ ನಾನು ಸಕ್ರಿಯವಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದಾರೆ. ರಾಜಣ್ಣ ಅವರ ಈ ಸರಣಿ ಹೇಳಿಕೆಗಳು ಕಾಂಗ್ರೆಸ್ ನ ಇಬ್ಬರು ದಿಗ್ಗಜ ನಾಯಕರ ನಡುವಿನ ಶೀತಲ ಸಮರವನ್ನು ಬೀದಿಗೆ ತಂದಿದೆ.

ShareTweetSendShare
Join us on:

Related Posts

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

by Shwetha
September 19, 2026
0

ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ಅನಂತ್ ನಾಗ್ ಅವರು ಇನ್ನು ಮುಂದೆ ನಟನೆಯಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ. ಐದು ದಶಕಗಳಿಗೂ ಹೆಚ್ಚು...

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

by Shwetha
September 19, 2026
0

ಮಂಗಳೂರು: ಕರಾವಳಿಯ ಹೆಬ್ಬಾಗಿಲು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಈಗ ಮಹತ್ವದ ಬದಲಾವಣೆಯೊಂದು ಗಾಳಿ ಬೀಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಇನ್ಮುಂದೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ...

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ ಸಾಧ್ಯತೆ: ಪ್ರತಿ ಲೀಟರ್‌ಗೆ ₹8 ಹೆಚ್ಚಳಕ್ಕೆ ನಾಲ್ಕು ಹಾಲು ಒಕ್ಕೂಟಗಳ ಪ್ರಸ್ತಾವನೆ

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ ಸಾಧ್ಯತೆ: ಪ್ರತಿ ಲೀಟರ್‌ಗೆ ₹8 ಹೆಚ್ಚಳಕ್ಕೆ ನಾಲ್ಕು ಹಾಲು ಒಕ್ಕೂಟಗಳ ಪ್ರಸ್ತಾವನೆ

by Shwetha
September 19, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಹಾಲಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಬೆಂಗಳೂರು ಹಾಲಿನ ಒಕ್ಕೂಟ (BAMUL), ಚಾಮರಾಜನಗರ ಹಾಲು ಉತ್ಪಾದಕರ ಒಕ್ಕೂಟ (ಚಮೂಲ್), ಮಂಡ್ಯ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 19, 2026
0

ದಿನ ಭವಿಷ್ಯ: 19-09-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ವೇಗ ಮತ್ತು ನಿಖರತೆಯನ್ನು ಮೇಲಾಧಿಕಾರಿಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram