ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ
ಬಳ್ಳಾರಿ : ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಸಾಕಷ್ಟು ನೀರು ಹರಿದು ಬರುತ್ತಿದೆ.
ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 60 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ.
ನೀರು ಬಿಟ್ಟಿರುವ ಕಾರಣ ವಿಶ್ವವಿಖ್ಯಾತ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ.
ಪುರಂದರದಾಸರ ಮಂಟಪ, ಧಾರ್ಮಿಕ ವಿಧಿವಿಧಾನ ಮಂಟಪ ನೀರಿನಲ್ಲಿ ಮುಳುಗಡೆಯಾಗಿವೆ.
ಇನು ನೀರು ಬಿಡುಗಡೆ ಕುರಿತು ನಿನ್ನೆಯೇ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಡಪ, ಅನಂತಪುರ ಹಾಗೂ ಮೆಹಬೂಬ್ ನಗರ ಜಿಲ್ಲಾಡಳಿತಗಳಿಗೆ ಟಿಬಿ ಬೋರ್ಡ್ ಮಾಹಿತಿ ರವಾನಿಸಿತ್ತು. ಅಲ್ಲದೆ ನದಿ ಪಾತ್ರದ ಜನರನ್ನು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.